ಕರಾವಳಿ

ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮತ್ತೆ ಅಡಚಣೆ?

394

ನ್ಯೂಸ್ ನಾಟೌಟ್: ಕೊಡಗಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿಯುವ ಆತಂಕ ವ್ಯಕ್ತವಾಗಿದೆ. ಇದೀಗ ಮಡಿಕೇರಿ ಸಮೀಪದ ಮದೆನಾಡಿನ ಕರ್ತೋಜಿ ಎಂಬಲ್ಲಿ ಗುಡ್ಡವೊಂದು ರಾಷ್ಟ್ರೀಯ ಹೆದ್ದಾರಿ 275 ಕ್ಕೆ ಕುಸಿಯುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಮಳೆ ಹೆಚ್ಚಾಗಿದ್ದೇ ಆದರೆ ರಾಷ್ಟ್ರೀಯ ಹೆದ್ದಾರಿ  275  ರ ಮೇಲೆ ಈ ಗುಡ್ಡ ಕುಸಿದು ಸಂಪೂರ್ಣ ಬಂದ್ ಆಗುವ ಸಾಧ್ಯತೆ ಹೆಚ್ಚಿದೆ.

2019 ರಲ್ಲೂ ಇದೇ ಭಾಗದಲ್ಲಿ ಗುಡ್ಡ ಕುಸಿತಗೊಂಡಿತ್ತು. ಇದೀಗ ರಸ್ತೆ ಬದಿಯ ಗುಡ್ಡದಲ್ಲಿನ  ಬಿರುಕು ಜನತೆಯಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ರಸ್ತೆಗೆ ಗುಡ್ಡ ಕುಸಿದಲ್ಲಿ ಮಡಿಕೇರಿ -ಮಂಗಳೂರು ಸಂಪರ್ಕ ಬಂದ್ ಸಾಧ್ಯತೆ ದಟ್ಟವಾಗಿದೆ. ಜೋರು ಮಳೆಯ ಸಂದರ್ಭದಲ್ಲಿ ಮಡಿಕೇರಿಗೆ ಪ್ರಯಾಣಿಸುವವರು ಅಥವಾ ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಕತ್ತಲಿನ ಸಮಯದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕಿದೆ. ಅಥವಾ ನೈಟ್ ಜರ್ನಿಯನ್ನು ಮಾಡದೇ ಇರುವುದು ಒಳ್ಳೆಯದು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.

See also  ಸುಳ್ಯ: ಸಿ.ಆರ್.ಪಿ.ಎಪ್ ಪಡೆ ಮತ್ತು ಪೊಲೀಸ್ ತುಕಡಿಗಳ ಪಥ ಸಂಚಲನ, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಣ್ಗಾವಲು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget