ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಸ್ನೇಹಿತೆಯನ್ನು ಕೊಂದು ಬಾಡಿಗೆ ಮನೆಯ ಫ್ರಿಡ್ಜ್ ​ನಲ್ಲಿಟ್ಟಿದ್ದ ವಿವಾಹಿತ..! ಬರೋಬ್ಬರಿ 8 ತಿಂಗಳ ಬಳಿಕ ಕೃತ್ಯ ಬಯಲಾಗಿದ್ದೇ ರೋಚಕ..!

ನ್ಯೂಸ್ ನಾಟೌಟ್: ವಿವಾಹಿತನೊಬ್ಬ ಲಿವ್ ​ಇನ್ ರಿಲೇಶನ್​ ಶಿಪ್ ​ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ ​ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಉಜ್ಜಯಿನಿ ನಿವಾಸಿಯಾಗಿರುವ ಆರೋಪಿ ಸಂಜಯ್ ಪಾಟಿದಾರ್ ಕಳೆದ ಐದು ವರ್ಷಗಳಿಂದ ಪ್ರತಿಭಾ ಯಾನೆ ಪಿಂಕಿ ಪ್ರಜಾಪತಿ ಜೊತೆ ಲಿವ್ಇನ್ ಸಂಬಂಧದಲ್ಲಿದ್ದ. ಆದರೆ ಆಕೆ ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಲು ಶುರುಮಾಡಿದ್ದಾಳೆ. ಅದಾಗಲೇ ಮದುವೆಯಾಗಿದ್ದ ಸಂಜಯ್ ಪಾಟಿದಾರ್, ಮದುವೆಗೆ ನಿರಾಕರಿಸಿದ್ದ. ಪ್ರತಿಭಾ ಮತ್ತಷ್ಟು ಪೀಡಿಸುತ್ತಿದ್ದಂತೆ ತನ್ನ ಸ್ನೇಹಿತ ವಿನೋದ್​ ದವೆಯನ್ನು ಕರೆಸಿಕೊಂಡಿದ್ದ ಸಂಜಯ್, ಪ್ರತಿಭಾಳನ್ನು ಕೊಲೆ ಮಾಡಿ ಮೃತದೇಹವನ್ನ ಫ್ರಿಡ್ಜ್ ​ನಲ್ಲಿಟ್ಟು ಮನೆ ಖಾಲಿ ಮಾಡಿದ್ದ. ಆದರೆ, ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ.

ಸಂಜಯ್ ಬಾಡಿಗೆ ಪಡೆದಿದ್ದ ಮನೆಯ ಫ್ರಿಡ್ಜ್ ​ನಲ್ಲಿ ಮೃತದೇಹವನ್ನಿಟ್ಟಿದ್ದ. ಶ್ರೀವಾಸ್ತವ ಎಂಬವರಿಂದ ಮನೆಯನ್ನು ಬಾಡಿಗೆ ಪಡೆದಿದ್ದ ಸಂಜಯ್, ವರ್ಷದ ಹಿಂದೆಯೇ ಮನೆ ಬಿಟ್ಟಿದ್ದ. ಆದಾಗ್ಯೂ ಆಗಾಗ ಬಂದು ಹೋಗುವುದನ್ನು ಮಾಡುತ್ತಿದ್ದ. ಅಲ್ಲದೆ, ಕೆಲವು ವಸ್ತುಗಳನ್ನು ಅಧ್ಯಯನ ಕೊಠಡಿ ಮತ್ತು ಮಾಸ್ಟರ್ ಬೆಡ್‌ ರೂಮ್‌ ನಲ್ಲಿ ಇರಿಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮನೆ ಮಾಲೀಕರಿಗೂ ಹೆಚ್ಚಿನ ವಿಚಾರ ಗೊತ್ತಿರಲಿಲ್ಲ.

ಇತ್ತೀಚೆಗೆ, ನೆರೆ ಮನೆಯವರು ಅನುಮಾನ ಬಂದು ಮನೆಯ ಬಾಗಿಲು ತೆರೆಯುವಂತೆ ಮಾಲೀಕರನ್ನು ಕೇಳಿದ್ದರು. ಹಾಗೆ ಬಾಗಿಲು ತೆರೆದಾಗ ಪಾಟಿದಾರ್ ​ಗೆ ಸಂಬಂಧಿಸಿದ ವಸ್ತುಗಳು ಒಳಗಿದ್ದ ಕಾರಣ ಮತ್ತೆ ಲಾಕ್ ಮಾಡಿದ್ದರು. ಆದರೆ, ಬುಧವಾರದಿಂದ ವಿದ್ಯುತ್ ಸರಬರಾಜನ್ನು ಆಫ್ ಮಾಡಿದ್ದರು. ಇದರಿಂದಾಗಿ ಫ್ರಿಡ್ಜ್​ನಲ್ಲಿದ್ದ ಮೃತದೇಹದ ವಾಸನೆ ಅಕ್ಕಪಕ್ಕದ ಮನೆಯವರಿಗೆ ಬಂದಿತ್ತು ಎಂದು ಪೊಲೀಸ್ ಅಧಿಕಾರಿ ಅಮಿತ್ ಸೋಲಂಕಿ ಎಂಬವರು ತಿಳಿಸಿದ್ದಾರೆ.
ಸೀರೆಯುಟ್ಟುಕೊಂಡು, ಆಭರಣ ತೊಟ್ಟು, ಅಲಂಕರಿಸಿಕೊಂಡು, ಕುತ್ತಿಗೆಯನ್ನು ತನ್ನ ಕೈಗಳಿಂದ ತಾನೇ ಬಲವಾಗಿ ಬಿಗಿಯಾಗಿ ಕಟ್ಟಿಕೊಂಡು ಕುಳಿತಿರುವ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಫ್ರಿಡ್ಜ್ ತೆರೆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಭಯಾನಕ ಸತ್ಯ ಬಯಲಾಗಿದೆ. ಯುವತಿಯನ್ನು 2024ರ ಜೂನ್ ​ನಲ್ಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Click

https://newsnotout.com/2025/01/kerala-misbehaviour-kannada-news-allegation-case-registered-s/
https://newsnotout.com/2025/01/naxal-surrender-issue-weapon-found-kannada-news-d/
https://newsnotout.com/2025/01/udupi-bike-and-lorry-issue-kananda-news-viral-news-hospital/
https://newsnotout.com/2025/01/shrirama-sena-kannada-news-complaint-issue-hd/
https://newsnotout.com/2025/01/gajadeepa-dankar-vice-president-of-india-kannada-news-d/

Related posts

ಇಷ್ಟಪಟ್ಟವರನ್ನು ಮದುವೆಯಾಗಿ ಎಂದ ಹೈಕೋರ್ಟ್, ದಂಪತಿಗೆ ಪೊಲೀಸ್ ಭದ್ರತೆ ನೀಡಿದ ಕೋರ್ಟ್ ಪೋಷಕರಿಗೆ ಹೇಳಿದ್ದೇನು? ಏನಿದು ಪ್ರಕರಣ?

ಹೈಕಮಾಂಡ್ ಸಿಎಂ ಆಗು ಅಂದ್ರೆ ನಾನು ಸಿದ್ಧ ಎಂದ ಪ್ರಿಯಾಂಕ್ ಖರ್ಗೆ!ಸಿದ್ದರಾಮಯ್ಯ ಹೇಳಿಕೆ ಕಲ್ಲಿನ ಕೆತ್ತಿದ ಶಾಸನವಲ್ಲ ಎಂದದ್ದೇಕೆ..? ಏನಿದು ಸಿಎಂ ಗಾದಿ ಗುದ್ದಾಟ..?

ಬಿಜೆಪಿ ವಾಟ್ಸಪ್‌ ವಿವಿಯಲ್ಲಿ ಬೆಳೆದು ಬಂದಿದ್ದು ! ಭಾರತದ ಭವಿಷ್ಯ ಬದಲಾಯಿಸಿ ಅಂದ್ರೆ, ಹೆಸರು ಬದಲಾಯಿಸಲು ಹೊರಟಿದ್ದಾರೆ! ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ!