ಕ್ರೈಂಸುಳ್ಯ

ಕನಕಮಜಲು: ಕಾಳು ಮೆಣಸು ಕೊಯ್ಯುತ್ತಿರುವಾಗ ತೆಂಗಿನ ಮರದಿಂದ ಕೆಳಕ್ಕೆ ಬಿದ್ದ 70 ವರ್ಷದ ವೃದ್ದ, ಆಸ್ಪತ್ರೆ ಸೇರುವಷ್ಟರಲ್ಲಿ ಹಾರಿ ಹೋಗಿತ್ತು ಪ್ರಾಣ ಪಕ್ಷಿ..!

183

ನ್ಯೂಸ್ ನಾಟೌಟ್: ಕಾಳು ಮೆಣಸು ಕೊಯ್ಯುತ್ತಿರುವಂತಹ ಸಂದರ್ಭದಲ್ಲಿ ಮರದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಇದೀಗ ಸುಳ್ಯದ ಜಾಲ್ಸೂರು ಸಮೀಪದ ಕನಕಮಜಲಿನಿಂದ ವರದಿಯಾಗಿದೆ.

ಸಾವನ್ನಪ್ಪಿರುವ ವ್ಯಕ್ತಿಯನ್ನು ಜಗನ್ನಾಥ ಎಂದು ಗುರುತಿಸಲಾಗಿದೆ. ಅವರಿಗೆ 70 ವರ್ಷವಾಗಿತ್ತು. ಅವರು ತೆಂಗಿನ ಮರ ಏರಿ ಕರಿ ಮೆಣಸು ಕೊಯ್ಯುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

See also  ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿದ ಮಹಿಳೆ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget