ನ್ಯೂಸ್ ನಾಟೌಟ್: ರಾಜ್ಯದಲ್ಲಿಯೇ ಅತೀ ದೊಡ್ಡ ದುರಂತವಾಗಿ ಪರಿಣಮಿಸಿದ್ದ ಶಿರೂರು ಗುಡ್ಡ ಕುಸಿತ ದುರಂತ ನಡೆದು ಒಂದು ವರ್ಷ ಸಮೀಪಿಸುತ್ತಿದೆ ಜುಲೈ ೧೬ರಂದು ಬೆಳಗ್ಗೆ ಈ ದುರಂತ ಸಂಭವಿಸಿ ೧೧ ಮಂದಿ ಸಾವನ್ನಪ್ಪಿದ್ದರು. ಇದೀಗ ಈ ದುರಂತದಿಂದ ಪಾರಾಗಿದ್ದ ವೃದ್ಧ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆಯಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ವೃದ್ಧನನ್ನು ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇವರಿಗೆ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಮದು ತಿಳಿದು ಬಂದಿದೆ.ಶಿರೂರು ದುರಂತದಲ್ಲಿ ಸ್ಪಲ್ಪದರಲ್ಲೇ ತಮ್ಮಣ್ಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರಕೃತಿ ವಿಕೋಪದಲ್ಲಿ ಬೀಸುವ ದೊಣ್ಣೆಯಿಂದ ಬಚಾವಾಗಿ ಜೀವ ಉಳಿಸಿಕೊಂಡಿದ್ದ ಇವರು , ಇದೀಗ ಮತ್ತೆ ಪ್ರಕೃತಿ ವಿಕೋಪಕ್ಕೆ ಬಲಿಯಾಗಿರುವುದು ವಿಪರ್ಯಾಸ.