ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರು: ಗ್ಯಾಸ್ ಟ್ಯಾಂಕರ್‌ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಷಾನಿಲ ಸೋರಿಕೆ..! ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆ, ಕಟ್ಟೆಚ್ಚರ..!

ನ್ಯೂಸ್ ನಾಟೌಟ್: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ ನಿಂದ ಹೈಡ್ರಾಲಿಕ್‌ ಆಸಿಡ್‌ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್‌ ಆಸಿಡ್‌ ಸಾಗಿಸುತ್ತಿದ್ದ ಟ್ಯಾಂಕರ್‌ ನಲ್ಲಿ ಅನಿಲ ಸೋರಿಕೆಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರ್‌ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ ಎಂದು ತಿಳಿದು ಬಂದಿದೆ.

Click

https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/
https://newsnotout.com/2024/12/kannada-news-bus-viral-news-belagavi-viral-news-s/
https://newsnotout.com/2024/12/monkey-kannada-news-viral-news-railway-monkey/

Related posts

ಕೊಡಿಯಾಲ ಬೈಲು: ಮನೆಯ ಅಂಗಳದಿಂದ ಅಡಿಕೆ ಕಳವು

ಸುಳ್ಯ : ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಹಿತರಕ್ಷಣಾ ವೇದಿಕೆಯಿಂದ ಮನವಿ ವಿಚಾರ ,ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾ. ಸಂಯೋಜಕ ಎನ್.ಟಿ ವಸಂತ್ ಖಂಡನೆ

ನೊಂದಣಿಯಾಗದ ಮದರಸ, ಚರ್ಚ್, ಮಠ​ಗಳಿಗೆ ಶಾಕ್..! ಜಿಲ್ಲಾಧಿಕಾರಿ ಹೇಳಿದ್ದೇನು..?