Latestಕ್ರೈಂರಾಜ್ಯ

KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ..! ಸ್ಥಳದಲ್ಲೇ ಸಾವು..!

1.2k

ನ್ಯೂಸ್‌ ನಾಟೌಟ್ : ಕೆ.ಎಸ್‌.ಆರ್‌.ಟಿ.ಸಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ ನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ. ಬಸ್ಸಿನ ಹಿಂಬದಿ ಚಕ್ರ ಯುವಕನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ.

ಯುವಕ ಆತ್ಮಹತ್ಯೆಗೆ ಶರಣಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  'ನಿಮಗೆ ತಾಕತ್ತಿದ್ದರೆ ಬನ್ನಿ.. ಮರಳು ಲಾರಿ ಹತ್ತಿಸಿ ನೋಡುವ' ಅಕ್ರಮ ಮರಳು ದಂಧೆಕೋರರಿಗೆ ಸವಾಲ್ ಹಾಕಿದ ಶಾಸಕಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget