ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರು: ಹಾಡಹಗಲೇ ಬಂದೂಕಿನಿಂದ ಸಿಬ್ಬಂದಿಯನ್ನು ಬೆದರಿಸಿ ಬ್ಯಾಂಕ್ ದರೋಡೆ..! ಹಣ ಮತ್ತು ಚಿನ್ನಾಭರಣಗಳೊಂದಿಗೆ ಕಾರಿನಲ್ಲಿ ಪರಾರಿ..!

172

ನ್ಯೂಸ್ ನಾಟೌಟ್: ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ ​​ನ ಕೋಟೆಕಾರು ಬ್ಯಾಂಕ್ ​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಹಾಡಹಗಲೇ ಬ್ಯಾಂಕ್​ಗೆ ನುಗ್ಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ​ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click

https://newsnotout.com/2025/01/software-engineer-arrested-kannada-news-viral-news-f/
https://newsnotout.com/2025/01/13-year-old-boy-got-abused-y-teacher-during-2016-to-2020/
https://newsnotout.com/2025/01/america-white-house-kannad-anews-8-year-jail-d/
https://newsnotout.com/2025/01/forest-department-investigation-kannada-news-5-to-6-hour/
https://newsnotout.com/2025/01/mangaluru-scooter-and-tempo-collision-kannada-news-man-nomore/
https://newsnotout.com/2025/01/darshan-thugudeepa-and-gang-kannada-news-supreme-court/
https://newsnotout.com/2025/01/imbran-khan-kannada-news-and-his-wife-got-sentence/
See also  ಬೆಂಕಿಯಿಂದ ತಪ್ಪಿಸಿಕೊಳ್ಳಲು 7ನೇ ಮಹಡಿಯಿಂದ ಇಬ್ಬರು ಮಕ್ಕಳನ್ನು ಹಿಡಿದುಕೊಂಡು ಜಿಗಿದ ತಂದೆ..! ಮೂವರೂ ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget