ಕರಾವಳಿದೇಶ-ಪ್ರಪಂಚ

ಮಂಗಳೂರು: ರೈಲಿನ ಶೌಚಾಲಯದಲ್ಲಿ ಹೃದಯಾಘಾತ ಶಂಕೆ,ವ್ಯಕ್ತಿ ಮೃತದೇಹ 24 ಗಂಟೆ ಶೌಚಾಲಯದಲ್ಲೇ ಬಾಕಿ

ನ್ಯೂಸ್ ನಾಟೌಟ್ :  ಮುಂಬೈ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರೈಲಿನ ಶೌಚಾಲಯದಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಈ ವಿಷಯ ರೈಲಿನ ಸಿಬ್ಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋಗಿರುವ ಘಟನೆ ನಡೆದಿದೆ.ಒಟ್ಟು ೨೪ ಗಂಟೆಗಳ ಕಾಲ ಶೌಚಾಲಯದಲ್ಲೇ ಇತ್ತು ಅನ್ನುವ ಮಾಹಿತಿ ಲಭ್ಯವಾಗಿದೆ.

ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ(56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.ಈ ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿವರೆಗೂ ಹುಡುಕಾಡಿದ್ದಾರೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ ಮಾಡಬೇಕಿದ್ದ ರೈಲು ಸಿಬ್ಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿರುವುದು ನೋವು ತಂದಿದೆ.ಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್‌ ಮಾಡಿ ಕಳಿಸಿದೆ. ಆದರೆ ಪಾರ್ಸೆಲ್‌ ಇಲ್ಲಿಗೆ ಬರುವಾಗ ದೇಹ ಪೂರ್ಣ ಕೊಳೆತು ದುರ್ವಾಸನೆ ಬೀರುತ್ತಿತ್ತು.

ಮೋಹನ್‌ ಬಂಗೇರ ಹಲವು ವರ್ಷಗಳಿಂದ ಮುಂಬಯಿನಲ್ಲಿ ಮಿಲ್ಕ್ ಪಾರ್ಲರ್‌ ನಡೆಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರು ಕಿನ್ನಿಗೋಳಿಯ ಮನೆಯಲ್ಲಿದ್ದಾರೆ.ಮುಂಬಯಿಯಿಂದ ಮೋಹನ್‌ ಬಂಗೇರ ಅವರು ಎ. 18ರ ಮುಂಬಯಿ ಸಿಎಸ್‌ಟಿ ಮಂಗಳೂರು ಜಂಕ್ಷನ್‌ ರೈಲಿನ ಬಿ-3 ಕೋಚ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಅವರನ್ನು ಕರೆದೊಯ್ಯಲು ಸೋದರ ಹಾಗೂ ಇತರರು ಸುರತ್ಕಲ್‌ನಲ್ಲಿ ಕಾಯುತ್ತಿದ್ದರು. ಆಗ ಮೋಹನ್‌ ಬಂಗೇರ ಅವರು ರೈಲಿನಲ್ಲಿ ನಾಪತ್ತೆಯಾದ ವಿಚಾರ ಅವರಿಗೆ ರೈಲಿನ ಟಿಟಿಇ ಮೂಲಕ ಫೋನ್‌ನಲ್ಲಿ ಲಭಿಸಿತು.

ಅವರ ಬ್ಯಾಗ್‌, ಪರ್ಸ್‌ ಮತ್ತು ಮೊಬೈಲ್‌ ಕುಳಿತಿದ್ದ ಜಾಗದಲ್ಲೇ ಇತ್ತು. ಟಿಟಿಇಯಲ್ಲಿ ಈ ಕುರಿತು ಮಾತನಾಡಿದಾಗ, ಅವರು ಮೋಹನ್‌ ಬಂಗೇರರು ಕಂಕಾವಲಿ ಅಥವಾ ಮಡಗಾಂವ್‌ನಲ್ಲಿ ಇಳಿದು ಹೋದಂತಿದೆ, ಅಲ್ಲಿಯ ಸಿಸಿಟಿವಿ ಫೂಟೇಜ್‌ ನೋಡಿದರೆ ಗೊತ್ತಾಗಬಹುದು ಎಂದಿದ್ದರು. ಬಳಿಕ ಮೋಹನ್‌ ಕುಟುಂಬದವರು ಮಂಗಳೂರು ಜಂಕ್ಷನ್‌ಗೆ ತೆರಳಿ ಅಲ್ಲಿನ ಅಧಿಕಾರಿಗಳ ಸಲಹೆಯಂತೆ ರೈಲ್ವೇ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.


ಈ ನಡುವೆ ಮುಂಬಯಿಯಲ್ಲಿರುವ ಸಂಬಂಧಿಕರೂ ಹಲವು ಸ್ಟೇಷನ್‌ಗಳಲ್ಲಿ ಸಿಸಿಟವಿ ದೃಶ್ಯಾವಳಿ ಪರಿಶೀಲನೆ ನಡೆಸಿದರೂ ಎಲ್ಲೂ ಪತ್ತೆಯಾಗಲಿಲ್ಲ. ಮರುದಿನ ಮೋಹನ್‌ ಅವರ ಅಣ್ಣ ರಾಮ ಬಂಗೇರ ಅವರಿಗೆ ಮುಂಬಯಿ ಸಿಎಸ್‌ಟಿ ಸ್ಟೇಷನ್‌ನಿಂದ ಟಿಟಿಇ ಕರೆ ಮಾಡಿದ್ದು ಮೃತದೇಹ ರೈಲಿನ ಟಾಯ್ಲೆಟ್‌ನಲ್ಲಿ ಪತ್ತೆಯಾಗಿರುವುದನ್ನು ತಿಳಿಸಿದರು.

ಈ ಕುರಿತು ಮಾತನಾಡಿರುವ ಮೋಹನ್‌ ಬಂಗೇರ ಅವರ ಸಹೋದರ ರಾಮಬಂಗೇರ, ತಮ್ಮನ ಮೃತದೇಹ ಮಂಗಳೂರಿಗೆ ರೈಲಿನ ಶೌಚಾಲಯದಲ್ಲೇ ಬಂದಿತ್ತು.ಆದರೆ ಸಿಬ್ಬಂದಿ ಸರಿಯಾಗಿ ಹುಡುಕಾಡದೆ ನಿರ್ಲಕ್ಷ್ಯ ತೋರಿದ್ದರು. ಒಂದು ವೇಳೆ ಅವರು ಜೀವಂತವಿದ್ದ ಸಣ್ಣ ಅವಕಾಶವಿದ್ದರೂ ಅವರನ್ನು ಬದುಕಿಸಬಹುದಿತ್ತು, ಆದರೆ ಟಾಯ್ಲೆಟ್‌ ತಪಾಸಣೆ ಮಾಡದೇ ಹೋದ ಕಾರಣ ಮೃತಶರೀರ ಅದೇ ರೈಲಿನಲ್ಲಿ ಮುಂಬಯಿಗೆ ಮರಳಿದೆ ಎಂದು ತಿಳಿಸಿದ್ದಾರೆ.

Related posts

ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಬಂದಿದ್ದ ಮುಸ್ಲಿಂ ಮುಖಂಡರಿಗೆ ಬೆದರಿಕೆ..! ಆಲ್ ಇಂಡಿಯಾ ಇಮಾಮ್ ಸಂಘಟನೆಯಿಂದ ರಾಜಿನಾಮೆಗೆ ಒತ್ತಡ..!

ಸುಳ್ಯ ಪರಿಸರದಲ್ಲಿ ಭಾರಿ ಮಳೆ:ಗಾಳಿ,ಗುಡುಗು-ಮಿಂಚು ಸಹಿತ ವರುಣನ ಎಂಟ್ರಿ

ಎನ್‌ಐಎ ತನಿಖೆಗೆ ವಹಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯ