ಕರಾವಳಿಕೊಡಗುಬೆಂಗಳೂರು

ಮಂಗಳೂರು: ಪ್ಲಾಸ್ಟಿಕ್ ಡಬ್ಬಿ ನುಂಗಿ ವಿಲವಿಲ ಒದ್ದಾಡಿದ ನಾಗಪ್ಪ..! ಸಮಯಕ್ಕೆ ಸರಿಯಾಗಿ ಬಂದು ಜೀವ ಉಳಿಸಿದ ವೈದ್ಯ ..!

ನ್ಯೂಸ್ ನಾಟೌಟ್ : ಸಣ್ಣ ಪ್ಲಾಸ್ಟಿಕ್ ಡಬ್ಬವೊಂದನ್ನು ನುಂಗಿ ಭಾರಿ ಸಂಕಟ ಪಡುತ್ತಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಕುತೂಹಲಕಾರಿ ಸುದ್ದಿಯೊಂದು ಹೊರಬಿದ್ದಿದೆ.ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ಸಮೀಪದಲ್ಲಿದ್ದ ಮನೆಯವರು ಜೂನ್ 6ರಂದು ವಗ್ಗದ ಉರಗತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದು,ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಶ್ಯಾಂ ಹಾವನ್ನು ಬಿಲದಿಂದ ಮೆಲ್ಲಗೆ ಹೊರ ತೆಗೆದು ರಕ್ಷಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು ಹೆಣಗಾಡುತ್ತಿತ್ತು.ಈ ವೇಳೆ ಅದರ ತಲೆಯ ಕೆಳಭಾಗದಲ್ಲಿ ಎರಡು ಗಾಯಗಳಾಗಿತ್ತು ಎಂದು ತಿಳಿದು ಬಂದಿದೆ.
ಇದಕ್ಕಾಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ನಿರ್ಧರಿಸಿ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತರಲಾಯಿತು.ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದು ಗಮನಿಸಿದರು.ನಂತರ ಎಕ್ಸ್ ರೇಯನ್ನೂ ಮಾಡಿದ್ದಾರೆ.ಆಗ ಅದರ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ವಸ್ತುವಿರುವುದು ಗಮನಕ್ಕೆ ಬಂದಿದೆ ಎಂಬ ಸಂಗತಿ ಹೊರಬಿದ್ದಿದೆ. ಕೂಡಲೇ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಲು ಮುಂದಾದ ವೈದ್ಯರು ಅದಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ.ಬಳಿಕ ಕೆಲವು ಗಂಟೆಗಳ ಶಸ್ತ್ರ ಚಿಕಿತ್ಸೆ ಬಳಿಕ ಹೊಟ್ಟೆಯೊಳಗಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.


ಡಾ.ಯಶಸ್ವಿಯವರ ಪ್ರಕಾರ ‘ಈ ಹಾವಿಗೆ ಸುಮಾರು 10ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಿದ್ದೇವೆ. ಸುಮಾರು ಐದು ಅಡಿ ಉದ್ದದ ಸಾಕಷ್ಟು ದಪ್ಪವೂ ಇದ್ದ ಹೆಣ್ಣು ನಾಗರಹಾವು ಇದಾಗಿತ್ತು.ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಲಾಗಿದೆ. ವೈದ್ಯರು ಯಾವುದೇ ತೊಂದರೆ ಇಲ್ಲವೆಂದು ಹೇಳಿದ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.ಒಟ್ಟಿನಲ್ಲಿ ಸರಿಯಾದ ಸಮಯಕ್ಕೆ ಹಾವನ್ನು ರಕ್ಷಿಸಿ ಅದಕ್ಕೆ ಶಸ್ತ್ರಚಿಕಿತ್ಸೆ ನೀಡಿರುವುದರಿಂದ ಅದರ ಜೀವ ಉಳಿಸಿದ ವೈದ್ಯರೇ ಗ್ರೇಟ್ !.

https://www.youtube.com/watch?v=hnkiiNe0x6M&t=12s

Related posts

ಕರಾವಳಿಯ ದೇಗುಲಗಳಲ್ಲಿ ಮುಂದುವರಿದ ವ್ಯಾಪಾರ ಧರ್ಮ ದಂಗಲ್..! ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ವರ್ಷವೂ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ..!

ಮಡಿಕೇರಿ: ಕುಕ್ಕುನೂರು ಬುಲ್ಸ್ ವಿರುದ್ಧ ಕಾಫಿ ಕ್ರಿಕೆಟರ್ಸ್ ಜಯ

ನಟ ದರ್ಶನ್‌ ಗೆ ಆಗಸ್ಟ್‌ 14ರ ವರೆಗೆ ಜೈಲೇ ಗತಿ..! ಅಧಿಕಾರಿಗಳು ಸಲ್ಲಿಸಿದ ರಿಮ್ಯಾಂಡ್ ಅರ್ಜಿಯಲ್ಲಿ ಏನಿತ್ತು..?