Latestಮಂಗಳೂರುವೈರಲ್ ನ್ಯೂಸ್

ಮಂಗಳೂರು: ನೆರೆ ಸಂತ್ರಸ್ತರಿಗೆ ಕದ್ರಿ ದೇಗುಲದಲ್ಲಿ ಊಟದ ವ್ಯವಸ್ಥೆ, ಇಲ್ಲಿದೆ ಸಂಪರ್ಕ ಸಂಖ್ಯೆ

835

ನ್ಯೂಸ್ ನಾಟೌಟ್: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಿಂದ ಸಂತ್ರಸ್ತರಾದವರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ (ಜೂ.15) ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ.

ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ.

ಸಂಪರ್ಕ ಸಂಖ್ಯೆ: ದಿಲ್ ರಾಜ್ ಆಳ್ವ ಮಂಗಳಾದೇವಿ- 9900512727, ರಾಜೇಂದ್ರ ಚಿಲಿಂಬಿ-9972185251, ಕಿರಣ್ ಕೊಡಿಯಾಲ್ ಬೈಲ್- 7899509356, ಅರುಣ್ ಕದ್ರಿ- 9243303805
ತೊಂದರೆಗೊಳಗಾದ ಮನೆಯವರು ಶ್ರೀ ಕ್ಷೇತ್ರಕ್ಕೆ ಬಂದು ತಮ್ಮ ಮನೆಯ ಸದಸ್ಯರಿಗೆ ಅನ್ನವನ್ನು ತೆಗೆದುಕೊಂಡು ಹೋಗಬೇಕಾಗಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ವಿಮಾನ ದುರಂತದ ಬೆನ್ನಲ್ಲೇ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ..! ಪೈಲೆಟ್ ಮತ್ತು ಮಗು ಸೇರಿ 7 ಮಂದಿ ಸಾವು.!

See also  ರಾತ್ರಿ ಕಸದ ಲಾರಿ ಮತ್ತು ಬೈಕ್ ನಡುವೆ ಅಪಘಾತ,ಯುವಕ - ಯುವತಿ ಸಾವು..! ಲಾರಿ ಚಾಲಕನನ್ನು ನಾನೇ ಕೊಲೆ ಮಾಡುವೇ ಎಂದ ಯುವಕನ ತಂದೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget