ನ್ಯೂಸ್ ನಾಟೌಟ್: ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು(ಮೇ.25) ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಈ ಲಾರಿ ಭಾರೀ ಮಳೆಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಈ ವೇಳೆ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದರ ಜೊತೆಗೆ ಶಿರಾಡಿ ಘಾಟ್ ಬಳಿ ರಸ್ತೆ ಕುಸಿಯುತ್ತಿದ್ದು, ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೂನಡ್ಕ: ಭಾರೀ ಗಾಳಿ-ಮಳೆಯಿಂದ ಕಟ್ಟಡಕ್ಕೆ ಹಾನಿ..! ಮರದ ಕೊಂಬೆಗಳು ಬಿದ್ದು ಕೊಠಡಿ ಜಖಂ..!