ಕರಾವಳಿಕ್ರೈಂಮಂಗಳೂರು

ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪೊಟ್ಟಣ ಎಸೆದು ವ್ಯಕ್ತಿ ಪರಾರಿ..! ತನಿಖೆ ನಡೆಸುತ್ತಿರುವ ಪೊಲೀಸರು

ನ್ಯೂಸ್‌ ನಾಟೌಟ್‌: ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ವ್ಯಕ್ತಿಯೊಬ್ಬ ಗಾಂಜಾ ಪೊಟ್ಟಣ ಎಸೆದು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು ಓಡಿ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು. ಪರಿಶೀಲನೆ ಮಾಡುವಾಗ ಪ್ಲಾಸ್ಟಿಕ್ ಕವರ್ ಸಿಕ್ಕಿದ್ದು ಅದರೊಳಗೆ ಗಾಂಜಾ ಮತ್ತು ಬಿಳಿ ಬಣ್ಣದ ಹರಳಿನಂತಿರುವ ಅನುಮಾನಸ್ಪದ ವಸ್ತುಗಳು ಕಂಡುಬಂದಿದೆ. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸುಳ್ಯ:ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ , ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳ ನೇಮಕ

ಗೂನಡ್ಕ: ಕಾರು ಅಪಘಾತದಲ್ಲಿ ಗಾಯಗೊಂಡು ಓಡುತ್ತಿದ್ದ ಹಸು ಕೆರೆಗೆ ಬಿದ್ದು ಸಾವು, ಕಾರಿನ ವೇಗಕ್ಕೆ 2 ಹಸು, 1 ಶ್ವಾನ ಬಲಿ