ಕರಾವಳಿ

ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳಿಂದ ಹಾನಿ

ಮಂಗಳೂರು : ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ವರದಿಯಾಗಿದೆ. ದೈವಸ್ಥಾನದ ಬಾಗಿಲು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದು ಜಾಲಾಡಿದ್ದಾರೆ. ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಮೇಲ್ನೋಟಕೆ ಕಂಡುಬಂದಿದೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts

ಸುಬ್ರಹ್ಮಣ್ಯದಲ್ಲೊಂದು ನಿಗೂಢ ಸಾವು! ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

ಆದಿಚುಂಚನಗಿರಿ ಶಾಖಾ ಮಠದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಲೋಗೋ ಅನಾವರಣ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯಿಂದ ಲೋಕಾರ್ಪಣೆ

ಇನ್ಮುಂದೆ ಖಾಸಗಿ ಬಸ್‌ನಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭಾಗ್ಯ..? ಕರ್ನಾಟಕ ರಾಜ್ಯ ಬಸ್‌ ಮಾಲೀಕರ ಒಕ್ಕೂಟದ ಅಧ್ಯಕ್ಷ ಹೇಳಿದ್ದೇನು?