ಕರಾವಳಿಕ್ರೈಂವೈರಲ್ ನ್ಯೂಸ್

ಮಂಗಳೂರು: ಇಂದಿರಾ ಕ್ಯಾಂಟೀನ್‌ ಬಳಿ ಬಸ್‌ ನಿರ್ವಾಹಕನ ಶವ ಪತ್ತೆ..! ಪ್ರಕರಣದ ಸುತ್ತ ಹಲವು ಅನುಮಾನ..!

250

ನ್ಯೂಸ್ ನಾಟೌಟ್: ಮಂಗಳೂರಿನ ಸ್ಟೇಟ್‌ ಬ್ಯಾಂಕ್‌ ನಲ್ಲಿ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬರ ಶವ ಸೋಮವಾರ(ಅ.14) ಪತ್ತೆಯಾಗಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತರು ಎಂದು ಗುರುತಿಸಲಾಗಿದೆ. ಅವರನ್ನು ಕೊಲೆ ಮಾಡಿರುವ ಶಂಕೆ ಮೂಡಿದ್ದು, ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶ ಅವರ ಜರ್ಜರಿತವಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇತ್ತೀಚೆಗೆ ಮಂಗಳೂರು ಖಾಸಗಿ ಬಸ್ ನಿರ್ವಾಹಕರ ನಡುವಿನ ಹಲವು ಹೊಡೆದಾಟಗಳು ಅನುಮಾನಕ್ಕೆ ಕಾರಣವಾಗಿವೆ.

ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Click

https://newsnotout.com/2024/10/kannada-news-renukaswamy-sahana-kannada-news-darshan/
See also  ತಿರುಪತಿ ಬೆಟ್ಟ ಹತ್ತುವಾಗ ಬಾಲಕಿ ಮೇಲೆ ದಿಢೀರ್ ಚಿರತೆ ದಾಳಿ! ತನ್ನೆಡೆಗೆ ಬರುತ್ತಿದ್ದ 6 ವರ್ಷದ ಬಾಲಕಿಯನ್ನು ವೆಂಕಟೇಶ್ವರನೂ ಕಾಯಲಿಲ್ಲವೇ? ಅಷ್ಟಕ್ಕೂ ಆ ರಾತ್ರಿ ಅಲ್ಲಿ ನಡೆದದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget