Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಮನೆಯ ಅವಶೇಷಗಳಡಿಯಿಂದ ತಾಯಿ, ಮಗುವಿನ ಮಾತು, ಅಳು ಕೇಳಿಸುತ್ತಿದೆ ಎಂದ ರಕ್ಷಣಾ ಸಿಬ್ಬಂದಿ..! ಇನ್ನೋರ್ವ ಮಹಿಳೆ ಸಾವು..!

999

ನ್ಯೂಸ್ ನಾಟೌಟ್: ಧಾರಾಕಾರ ಮಳೆಗೆ ಮಂಗಳೂರಿನ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದರೆ, ಮೂವರು ಕುಸಿದ ಮಣ್ಣು, ಮನೆಯ ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಸುಮಾರು ಮುಂಜಾನೆ 4 ಗಂಟೆಗೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಗುಡ್ಡ ಕುಸಿದು ಬಿದ್ದ ತೀವ್ರತೆಗೆ ಮನೆ ಸಂಪೂರ್ಣ ನೆಲಸಮಗೊಂಡಿದ್ದು, ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಸೀತಾರಾಮರ ಪತ್ನಿ ಅಶ್ವಿನಿ ಹಾಗೂ ಇಬ್ಬರು ಪುಟ್ಟ ಮಕ್ಕಳು( 3 ಹಾಗೂ 2 ವರ್ಷದ ಮಕ್ಕಳು) ಕುಸಿದ ಮನೆಯೊಳಗೆ ಸಿಲುಕಿಕೊಂಡಿದ್ದಾರೆ. ಕಾಂತಪ್ಪ ಹಾಗೂ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಡ್ಡ ಕುಸಿತದಿಂದ ಕುಸಿದುಬಿದ್ದಿರುವ ಮನೆಯ ಅವಶೇಷಗಳಡಿಯಲ್ಲಿ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ 3 ಹಾಗೂ 2 ವರ್ಷದ ಇಬ್ಬರು ಮಕ್ಕಳು ಸಿಲುಕಿಕೊಂಡಿದ್ದಾರೆ. ಇವರು ಗುಡ್ಡ ಕುಸಿದ ಮನೆಯ ಒಂದು ಭಾಗದ ಕೋಣೆಯಲ್ಲಿ ಮಲಗಿದ್ದರು ಎಂದು ತಿಳಿದುಬಂದಿದೆ.
ಮನೆಯೊಳಗೆ ಸಿಲುಕಿರುವ ಅಶ್ವಿನಿ ಒಳಗಡೆಯಿಂದ ಕೊಂಚ ಮಾತನಾಡುತ್ತಿದ್ದರೆ, ಒಂದು ಮಗು ಅಳುವ ಶಬ್ದ ಕೇಳಿಸುತ್ತಿದೆ.

ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಮನೆಯು ಸಂಪೂರ್ಣ ಕುಸಿದ ಪರಿಣಾಮ ರಕ್ಷಣಾ ಕಾರ್ಯ ಕಷ್ಟವಾಗಿತ್ತು. ಅಲ್ಲದೇ ಈ ಮನೆಗೆ ಸಮರ್ಪಕ ದಾರಿ ವ್ಯವಸ್ಥೆ ಇಲ್ಲದಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಮಳೆ ಕೂಡಾ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟು ಮಾಡುತ್ತಿದೆ.

ಸದ್ಯ ಎನ್ ಡಿ ಆರ್ ಎಫ್, ಎಸ್ ಡಿಆರ್ ಪಿ, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭರದ ರಕ್ಷಣಾ ಕಾರ್ಯ ಮುಂದುವರಿಸಿದ್ದು ತಾಯಿ ಹಾಗೂ ಇಬ್ಬರು ಮಕ್ಕಳ ರಕ್ಷಣೆಗೆ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಪಾ ವೊಂದರಲ್ಲಿ ಕೆಲಸ ಬಿಟ್ಟು ಸ್ವಂತ ಸಲೂನ್ ಮಾಡಿದ್ದಕ್ಕೆ ಲೇಡಿ ಗ್ಯಾಂಗ್ ನಿಂದ ಹಲ್ಲೆ..! ಮೂವರು ಅರೆಸ್ಟ್‌..!

ಉಳ್ಳಾಲ:ಮನೆ ಮೇಲೆ ತಡೆಗೋಡೆ ಬಿದ್ದು 10ವರ್ಷದ ಬಾಲಕಿ ಸಾವು..! ಫಲಿಸದ ಚಿಕಿತ್ಸೆ

See also  ಮಹಿಳೆ ಜತೆ ವೈದ್ಯ ಅಸಭ್ಯ ವರ್ತನೆ ಪ್ರಕರಣಕ್ಕೆ ಭಾರಿ ತಿರುವು..ವೈದ್ಯ ನಿರಾಪರಾಧಿ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget