ನ್ಯೂಸ್ ನಾಟೌಟ್: ಮಂಗಳೂರು ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಹೊರರಾಜ್ಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ.
ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ತನ್ನ ಸಾಮೂಹಿಕವಾಗಿ ಅಚ್ಯಾಚಾರ ಎಸಗಲಾಗಿದೆ ಎಂಬ ಯುವತಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ವೈದ್ಯಕೀಯ ವರದಿ ಬಂದ ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆಯೋ ಅಥವಾ ಇಲ್ಲವೋ ಎಂಬುವುದು ತಿಳಿಯಲಿದೆ. ಮಂಗಳೂರಿನಲ್ಲಿ ಪರಿಚಯವಾದ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಾರೆ. ಪ್ರಕರಣದ ತನಿಖೆಯನ್ನು ಉಳ್ಳಾಲ ಪೊಲೀಸರು ಮುಂದುವರೆಸಿದ್ದಾರೆ.
ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, “ಬುಧವಾರ (ಏ.16) ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಮಧ್ಯರಾತ್ರಿ 1.30ರ ಸುಮಾರಿಗೆ 112ಗೆ ಯುವತಿಯೊಬ್ಬಳು ಕೂಗಾಡುತ್ತಿದ್ದಾಳೆ, ಆಕೆಗೆ ಹಲ್ಲೆ ಮಾಡಿದ್ದಾರೆ ಎಂದು ಕರೆ ಬಂದಿತ್ತು. ತಕ್ಷಣ ನಮ್ಮ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ. ಯುವತಿ ಮಾತನಾಡುವ ಸ್ಥಿತಿಯಲ್ಲಿರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಹೇಳಿಕೆ ಪ್ರಕಾರ ಬುಧವಾರ ರಾತ್ರಿ ಯಾರೋ ಅವರಿಗೆ ಮದ್ಯಪಾನ ಮಾಡಿಸಿದ್ದಾರೆ. ಕಾರಿನಲ್ಲಿ ಮೂವರು ಇದ್ದಿದ್ದಾಗಿ ಯುವತಿ ಹೇಳಿಕೆ ನೀಡಿದ್ದಾರೆ. ಯುವತಿಗೆ ಪ್ರಜ್ಞೆ ಬಂದ ಬಳಿಕ ಒಳ ಉಡುಪು ಇರಲಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.
“ಕೂಗಾಡಲು ಶುರು ಮಾಡಿದಾಗ ಆರೋಪಿಗಳು ಯುವತಿಯನ್ನು ಕೃತ್ಯ ನಡೆದ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಯುವತಿ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.
ರೀಲ್ಸ್ ವಿಡಿಯೋಗಾಗಿ ನದಿಗಿಳಿದ ವೇಳೆ ಕೊಚ್ಚಿ ಹೋದ ಯುವತಿ..! ವಿಡಿಯೋ ವೈರಲ್