ಕ್ರೈಂವೈರಲ್ ನ್ಯೂಸ್

ಮಂಗಳೂರಿನಲ್ಲಿ ಭೀಕರ ತಲ್ವಾರ್ ದಾಳಿ..! ಇಬ್ಬರಿಗೆ ಗಂಭೀರ..!

ನ್ಯೂಸ್ ನಾಟೌಟ್ : ತಂಡವೊಂದು ತಲ್ವಾರ್ ನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ(ಅ.23)ನಡೆದಿದೆ.

ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಹಳೆಯ ದ್ವೇಷಕ್ಕೆ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಬಲ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ. ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ ಮನ್ಸೂರ್ ಮುಖಕ್ಕೆ ಕಡಿದಿದ್ದಾನೆ. ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿದ್ದಾನೆ. ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತಸ್ಲೀಮ್ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ‌ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/10/kannada-news-railway-rajasthani-jaipura-october/
https://newsnotout.com/2024/10/bsnl-new-logo-kannada-news-introduced-network-kannada-news/
https://newsnotout.com/2024/10/byelection-kannada-news-congress-opration-viral-news/
https://newsnotout.com/2024/10/mangaluru-kannada-news-surathkal-kannada-news/
https://newsnotout.com/2024/10/mangaluru-kannada-news-helmet-kannada-news-mangaluru/

Related posts

ಪುಂಜಾಲಕಟ್ಟೆ:ಕಾರು-ಸ್ಕೂಟಿ ಡಿಕ್ಕಿ:ಓರ್ವ ಮೃತ್ಯು,ಮತ್ತೋರ್ವ ಗಂಭೀರ

ಭಾರಿ ಭೂಕಂಪಕ್ಕೆ ತತ್ತರಿಸಿದ ನೇಪಾಳ..! ಬರೋಬ್ಬರಿ 10 ಕೋಟಿ ಮೌಲ್ಯದ ಪರಿಹಾರ ಸಾಮಗ್ರಿ ಕಳುಹಿಸಿದ ಭಾರತದ ಬಗ್ಗೆ ನೇಪಾಳ ಹೇಳಿದ್ದೇನು?

ಡಾಲರ್‌ ನೋಟಿನಿಂದ ಬೆವರು ಒರೆಸಿಕೊಂಡ ಪಾಕ್ ಕ್ರಿಕೆಟಿಗ..! ಇಲ್ಲಿದೆ ವಿವಾದಾತ್ಮಕ ವಿಡಿಯೋ