ಕರಾವಳಿಕ್ರೈಂ

ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರಿನಿಂದ ದಾಳಿ! 24 ಗಂಟೆಯೊಳಗೆ ತಲವಾರು ಸಮೇತ ಮೂವರನ್ನು ಬಂಧಿಸಿದ ಪೊಲೀಸರು! ದಾಳಿಗೆ ಕಾರಣವೇನು?

176

ನ್ಯೂಸ್ ನಾಟೌಟ್: ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ನಡೆದಿದೆ.

ಯತ್ನಿಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆ ಉಪಯೋಗಿಸಿದ್ದ ತಲವಾರು ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತ ಆರೋಪಿಗಳಾಗಿದ್ದು, ಆ.20ರಂದು ಅನ್ಯ ಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಕೂಟಿಯಲ್ಲಿ ಬಂದು ಅಡ್ಡಗಟ್ಟಿ ತಲವಾರು ಬೀಸಿದ್ದು, ಈ ವೇಳೆ ತಪ್ಪಿಸಿಕೊಂಡಿದ್ದಾರೆ, ಆದರೂ ಮುಖಕ್ಕೆ ಗಾಯವಾಗಿದೆ ಎನ್ನಲಾಗಿದೆ.

24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳ ಬಂಧನವಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ವಿಚಾರಣೆ ಪ್ರಗತಿಯಲ್ಲಿದೆ. ಈ ದಾಳಿ ಕೋವು ಉದ್ದೇಶದಿಂದ ನಡೆದಿದೆಯೋ ಅಥವಾ ಬೇರೆ ವೈಯಕ್ತಿಕ ವಿಚಾರಗಳೇನಾದರು ಇದಕ್ಕೆ ಕಾರಣವಾಗಿದೆಯಾ ಎಂಬ ಬಗ್ಗೆ ಪೊಲೀಸರ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

See also  ಆರಿಕೋಡಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜನಜಾತ್ರೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget