ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುವೈರಲ್ ನ್ಯೂಸ್

ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ..! ಚುನಾವಣಾ ಆಯೋಗದಿಂದ ನೋಟಿಸ್​

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ರಂಜಾನ್​ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ ಎನ್ನಲಾಗಿದೆ.

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು. ಇದೀಗ ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Related posts

279 ರೂಪಾಯಿ ಬಿರಿಯಾನಿ ತಿಂದು 7 ಲಕ್ಷದ ಕಾರು ಗೆದ್ದದ್ದು ಹೇಗೆ..? ಇಲ್ಲಿದೆ ಅದೃಷ್ಟಶಾಲಿಯ ಇಂಟ್ರೆಸ್ಟಿಂಗ್ ಸ್ಟೋರಿ

ಗರ್ಭಿಣಿ ಮೇಲೆ ನಾಯಿ ದಾಳಿ, ಸ್ಥಳದಲ್ಲೇ ಗರ್ಭಪಾತ..! ನಾಯಿ ಮಾಲೀಕನಿಗೆ 10 ಲಕ್ಷ ರೂ. ದಂಡ..!

ಮಂಗಳೂರಿನಲ್ಲಿ ಧಗ..ಧಗ ಹೊತ್ತಿ ಉರಿದ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು, ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ಕಾರಿನಲ್ಲಿ ಹಠಾತ್ ಬೆಂಕಿ