ಕರಾವಳಿಕ್ರೈಂ

ಮರಳು ಮಾಫಿಯಾಕ್ಕೆ ಬಿಸಿ ಮುಟ್ಟಿಸಿದ ಪೊಲೀಸರು; ಟಿಪ್ಪರ್, ಮರಳು ವಶ

294

ನ್ಯೂಸ್‌ನಾಟೌಟ್‌: ಮಂಗಳೂರಿಗೆ ನೂತನ ಪೊಲೀಸ್‌ ಕಮಿಷನರ್‌ ಆಗಿ ಕುಲ್‌ದೀಪ್‌ ಆರ್‌.ಜೈನ್‌ ಅಧಿಕಾರ ಸ್ವೀಕರಿಸಿದ ಬಳಿಕ ಮರಳು ಮಾಫಿಯಾ ತಡೆಗಟ್ಟಲು ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ನಗರದ ಪಣಂಬೂರು, ಕಂಕನಾಡಿ, ಉಳ್ಳಾಲ, ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು, ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಫೆ. 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ಮತ್ತು ಫೆ,26ರಂದು ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸರು ವಶಪಡಿಸಿದ್ದಾರೆ.

ಫೆ.28ರಂದು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂಕುದ್ರು ಎಂಬಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಎರಡು ಯುನಿಟ್‌ನಷ್ಟು ಮರಳು ಹಾಗೂ ಖಾಲಿ ಟಿಪ್ಪರನ್ನು ವಶಕ್ಕೆ ಪಡೆಯಲಾಗಿದೆ.

ಮಾರ್ಚ್ 1ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅಕ್ರಮ ದಾಸ್ತಾನು ಮಾಡಿರುವ ಸುಮಾರು 10 ಲೋಡ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ಸ್ವಾಧೀನಪಡಿಸಿದ್ದಾರೆ. ಎಲ್ಲ ಪ್ರಕರಣಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಸುಬ್ರಹ್ಮಣ್ಯ : ದೇವರಗದ್ದೆ ಕೊರಗಜ್ಜನ ಗುಡಿಗೆ ರ‍್ಯಾಪರ್  ಚಂದನ್ ಶೆಟ್ಟಿ,ನಿರಂಜನ್ ದಂಪತಿ ಭೇಟಿ,ಆಲ್ಬಂ ಸಾಂಗ್,ಚಲನ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget