ರಾಜ್ಯವೈರಲ್ ನ್ಯೂಸ್

ಮಂತ್ರಾಲಯದಲ್ಲಿ ಭಾರೀ ಮಳೆಗೆ ಮಠದ ಅಂಗಳದಲ್ಲೇ ಮಲಗಿದ ಭಕ್ತರು..! ರಾಯರು ಸಶರೀರರಾಗಿ ವೃಂದಾವನಸ್ಥರಾದ ಪೂರ್ವಾರಾಧನೆಗೆ ಸೇರಿದ ಜನ

ನ್ಯೂಸ್ ನಾಟೌಟ್: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ.

ಗುರು ರಾಘವೇಂದ್ರ ಸ್ವಾಮಿಗಳ 35ನೇ ಆರಾಧನಾ ಮಹೋತ್ಸವ ಹಿನ್ನೆಲೆ ರಾಜ್ಯದ ಮೂಲೆಗಳಿಂದ ಭಕ್ತರು ಮಠಕ್ಕೆ ಆಗಮಿಸಿದ್ದಾರೆ. ಬೆಳಗಿನ ಜಾವದ ಮಳೆಯಿಂದಾಗಿ ಮಲಗಲು ಜಾಗವಿಲ್ಲದೇ ಪರದಾಡಬೇಕಾಯಿತು. ಕೊನೆಗೆ ಭಕ್ತರ ಬಳಿಗೆ ಆಗಮಿಸಿದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಪರ್ಯಾಯ ವ್ಯವಸ್ಥೆ ಮಾಡಿಸಿದ್ದಾರೆ. ಮಠದ ಪ್ರಾಕಾರ, ಪ್ರವಚನ ಮಂಟಪದಲ್ಲಿ ಭಕ್ತರಿಗೆ ಮಲಗಲು ಮಠದ ಸಿಬ್ಬಂದಿ ಅನುವು ಮಾಡಿಕೊಟ್ಟಿದ್ದಾರೆ. ಇಂದು(ಆ.20) ರಾಯರ ಪೂರ್ವಾರಾಧನೆ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ರಾತ್ರಿಯೇ ಆಗಮಿಸಿದ ಭಕ್ತರು ಮಠದ ಆವರಣದಲ್ಲಿ ಮಲಗಿದ್ದರು.
ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ.

Click

https://newsnotout.com/2024/08/bengaluru-lady-case-under-twist-kannada-news-fir/
https://newsnotout.com/2024/08/duplicate-currency-note-kannada-news-youtube-puttur-mangaluru/

Related posts

ಕೈಯಲ್ಲಿ ಶೂ ಹಿಡಿದು ಪ್ರತಿಜ್ಞೆ ಮಾಡಿದ ಅಣ್ಣಾಮಲೈ…! ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಲವ್ವರ್ ಜೊತೆ ಸಿಕ್ಕಿ ಬಿದ್ದ ಪತ್ನಿಯನ್ನು ಜೀವಂತ ಸುಟ್ಟನಾ ಪತಿ..! ಲವ್ವರ್ ಬೆಂಕಿಯಿಂದ ಪಾರಾದದ್ದೇಗೆ..? ಇಲ್ಲಿದೆ ವಿಚಿತ್ರ ಲವ್ ಸ್ಟೋರಿ

ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆವಳುತ್ತಾ ಸಾಗುತ್ತಿರುವ ತಾಯಿ..! ಈಕೆಯ ಕಷ್ಟಕ್ಕೆ ಕೊನೆಯಿಲ್ಲವೇ..?