ನ್ಯೂಸ್ ನಾಟೌಟ್: ಮರ್ಕಂಜದ ಅತ್ಯಂತ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಮಿನುಂಗೂರು ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಹುಂಡಿಯಿಂದ ಕಳ್ಳರು ನಗದು ದೋಚಿ ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಈ ಪ್ರಕರಣ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸುಮಾರು ನಾಲ್ಕು ಸಾವಿರ ಹಣವನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ತನಿಖೆ ನಡೆಯುತ್ತಿದೆ. ಇತ್ತೀಚೆಗೆ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ತೆಗೆದು ದೇವಸ್ಥಾನದ ಖಾತೆಗೆ ಹಾಕಲಾಗಿತ್ತು. ಹೀಗಾಗಿ ಭಾರಿ ಮೊತ್ತದ ಹಣ ಕಳ್ಳರಿಗೆ ಸಿಗಲಿಲ್ಲ ಎನ್ನಲಾಗಿದೆ.