ಕ್ರೈಂವೈರಲ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದನಾ ಯೋಧ..? ಆತನಿಗಿಂತ 14 ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ..!

ನ್ಯೂಸ್ ನಾಟೌಟ್: ಓರ್ವ ಯೋಧನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿ ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿದ್ದಾರೆ. ಬೆಳಗಾವಿಯ ಮಚ್ಚೆ ಗ್ರಾಮದ ನಿವಾಸಿ ಹೋರಾಟಗಾರ್ತಿ ಪ್ರಮೋದಾ ಹಜಾರೆ, ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ್ ನಲವಡೆ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಸದ್ಯ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿದ್ದಾರೆ.

ಆರು ವರ್ಷದ ಹಿಂದೆ ಫೇಸ್ಬುಕ್ ​ನಲ್ಲಿ ಅಕ್ಷಯ್ ನಲವಡೆ ಪರಿಚಯವಾಗಿದ್ದ. ತನಗಿಂತ ಹದಿನಾಲ್ಕು ವರ್ಷ ಹೆಚ್ಚಿನ ವಯಸ್ಸಿನ ಮಹಿಳೆ ಜೊತೆಗೆ ಪ್ರೀತಿ ಮಾಡಿದ್ದ ಎನ್ನಲಾಗಿದೆ. ಮದುವೆ ಆಗುವುದಾಗಿ ಹೋರಾಟಗಾರ್ತಿಗೆ ನಂಬಿಸಿದ್ದ. ಆರು ವರ್ಷದ ಹಿಂದೆ ಮನೆಯ ದೇವರ ಕೋಣೆ ಮುಂದೆ ಪ್ರಮೋದಾ ಮತ್ತು ಅಕ್ಷಯ್ ಮದುವೆಯಾಗಿದ್ದರು. ಬಳಿಕ ಆತ ಸೇನೆಯಿಂದ ರಜೆಗೆ ಬಂದಾಗ ಹದಿನೈದು ದಿನಗಳ ಕಾಲ ಪ್ರಮೋದಾ ಬಳಿ ಉಳಿದುಕೊಳ್ಳುತ್ತಿದ್ದ ಎನ್ನಲಾಗಿದೆ.

ಇದೇ ವೇಳೆ ಅಕ್ಷಯ್ ​ಗೆ ಒಂಬತ್ತು ಯುವತಿಯರ ಜೊತೆಗೆ ನಂಟಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಲಾಗಿದೆ. ಅದನ್ನು ಪ್ರಶ್ನೆ ಮಾಡಿದ ಬಳಿಕ ಎಲ್ಲರನ್ನೂ ಬಿಟ್ಟು ಜೊತೆಗೆ ಇರುವುದಾಗಿ ಅಕ್ಷಯ್ ಹೇಳಿದ್ದ. ಮೊನ್ನೆ ಅಕ್ಷಯ್ ರಜೆಗೆ ಬಂದಾಗ ಬೇರೊಬ್ಬ ಯುವತಿ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ. ಈ ವಿಚಾರ ಗೊತ್ತಾಗಿ ಪ್ರಮೋದಾ ಅಕ್ಷಯ್ ಮನೆಗೆ ಹೋಗಿದ್ದರು. ಹಿರಿಯರು, ಕುಟುಂಬಸ್ಥರು ಕೂಡಿಕೊಂಡು ಸರಿಪಡಿಸುವುದಾಗಿ ಹೇಳಿ ಕಳಿಸಿದ್ದರು. ಬಳಿಕ ಮದುವೆ ಆಗಲ್ಲ ಎಂದು ಅಕ್ಷಯ್ ಈ ಮಹಿಳೆಗೆ ಹೇಳಿದ್ದ ಎನ್ನಲಾಗಿದೆ.

ಇದೀಗ ಅಕ್ಷಯ್ ಇಂದು ಮದುವೆ ಆಗಿದ್ದಾನೆ ಅಂತಾ ಆತನ ಮನೆಗೆ ಪ್ರಮೋದಾ ಬಂದಿದ್ದಾರೆ. ಆದರೆ ಅಕ್ಷಯ್ ಕುಟುಂಬಸ್ಥರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸಾಯುವವರೆಗೂ ಮ‌ನೆ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

Click

https://newsnotout.com/2024/11/16-year-old-or-with-in-that-age-noone-can-use-mobile-in-australia/
https://newsnotout.com/2024/11/gujarath-railway-station-kannada-news-village-investigation/
https://newsnotout.com/2024/11/kannada-news-ambulance-16-year-old-girl-kannada-news/
https://newsnotout.com/2024/11/narendra-modi-special-protection-group-women-viral-photo/
https://newsnotout.com/2024/11/chandrashekar-sampaje-fir-bengaluru-muslim-statement-viral/
https://newsnotout.com/2024/11/delhi-kannada-news-cm-siddaramayya-4-month-difference/


Related posts

ಆಂಬ್ಯುಲೆನ್ಸ್ ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್..! ಮರುದಿನ ರಸ್ತೆ ಬದಿಯಲ್ಲಿ ಆಕೆಯನ್ನು ಎಸೆದು ಆರೋಪಿಗಳು ಪರಾರಿ..!

14 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ..! ಕಾರ್ಕಳದ ಶಾಲಾ ಮುಖ್ಯ ಶಿಕ್ಷಕ ಪೊಲೀಸ್ ವಶಕ್ಕೆ

ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ..! ವೈದ್ಯರೇ ಕಂಗಾಲು..!