ನ್ಯೂಸ್ ನಾಟೌಟ್: 2 ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿಗೆ ವಿಷಯ ಗೊತ್ತಾಗಿ ಮಂಟಪದಲ್ಲೇ ಮೊದಲ ಪತ್ನಿ ಬಂದು ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಈ ಘಟನೆ ಇಂದು(ಜೂ.8) ನಡೆದಿದೆ.
4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ ನನ್ನು ಕೈ ಹಿಡಿದಿದ್ದಳು.
ಆದರೆ, ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಮಾಹಿತಿಗಳ ಪ್ರಕಾರ, ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ಮೊದಲ ಪತ್ನಿಗೆ ಗೊತ್ತಾಗಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಮದುವೆಗೆ ತಯಾರಾಗಿದ್ದ ವಧುವಿನ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.