ನ್ಯೂಸ್ ನಾಟೌಟ್: ಎರಡು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವವಿವಾಹಿತೆಯನ್ನು ಅನಿವಾರ್ಯ ಕಾರಣಗಳ ನೆಪ ಹೇಳಿ ಇತ್ತೀಚೆಗೆ ಮೇ.10 ರಂದು ಗಂಡನ ಮನೆಗೆ ಕರೆತರಲಾಗಿದೆ. ಆದರೆ ರಾತ್ರಿ ಬೆಳಗಾಗುವಷ್ಟರಲ್ಲಿ ಮಾ.11ಕ್ಕೆ ಪತ್ನಿಯೂ ಕಾಣೆಯಾಗಿದ್ದು, ಸಾವಿರಾರು ಕನಸು ಕಂಡಿದ್ದ ಪತಿಯೂ ಆಘಾತಕ್ಕೆ ಒಳಗಾಗಿದ್ದಾನೆ.
ರಾಮ್ ಪ್ರತಾಪ್ ಎನ್ನುವ ವ್ಯಕ್ತಿಯೂ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಹಾರಾಜ್ ಗಂಜ್ ನ ಹಳ್ಳಿಯ ಯುವತಿಯ ಜೊತೆಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾನೆ. ಆದರೆ ಪತ್ನಿಯೂ ಗಂಡನ ಮನೆಗೆ ಮೇ 10 ರಂದು ಬಂದಿದ್ದು ಸಾವಿರಾರು ಕನಸು ಕಂಡಿದ್ದ ರಾಮ್ ಪ್ರತಾಪ್ ಗೆ ಆಘಾತವೊಂದು ಕಾದಿತ್ತು. ಮರುದಿನ ಅಂದರೆ ಮೇ 11 ರ ಬೆಳಿಗ್ಗೆ ತನ್ನ ಪತ್ನಿ ಎಲ್ಲಿಯೂ ಕಾಣಿಸಲಿಲ್ಲ. ಹೀಗಾಗಿ ರಾಮ್ ಪ್ರತಾಪ್ ಪತ್ನಿಯನ್ನು ಹುಡುಕಾಡಲು ಪ್ರಾರಂಭಿಸಿದ್ದಾನೆ.
ಅಷ್ಟೇ ಅಲ್ಲದೇ ಮುಂದೆ ನಿಂತು ಮದುವೆ ಮಾಡಿಸಿದ್ದ ಮಲ್ಲವಾನ್ ಪೊಲೀಸ್ ಠಾಣೆಯಲ್ಲಿ ತನ್ನ ಮದುವೆಗೆ ಮಧ್ಯಸ್ಥಿಕೆ ವಹಿಸಿದ್ದ ಉಂಚಟಿಲಾದ ದಿನೇಶ್, ಬಾಘ್ರೈನ ಶ್ಯಾಮು ಮತ್ತು ಮಜ್ಹಿಯಾದ ಕುಲದೀಪ್ ಎಂಬವರಿಗೆಲ್ಲಾ ತನ್ನ ಪತ್ನಿ ಕಾಣೆಯಾಗಿರುವುದನ್ನು ತಿಳಿಸಿದ್ದಾನೆ. ಆದರೆ ಮದುವೆ ಮಾಡಿಸಿಕೊಟ್ಟ ಈ ವ್ಯಕ್ತಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಈ ಮೂವರಿಂದ ತನಗೇನೂ ಸಹಾಯವಾಗದು ಎಂದು ತಿಳಿದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ 13,000 ರೂಪಾಯಿ ಕೂಡ ಕಾಣುತ್ತಿಲ್ಲ , ಹೆಂಡತಿಯೂ ಕಾಣುತ್ತಿಲ್ಲ ಎಂದು ಈ ಬಗ್ಗೆ ದೂರು ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷನಿಗೆ ಮಾರಣಾಂತಿಕ ಕ್ಯಾನ್ಸರ್..! ಬೇಸರ ವ್ಯಕ್ತಪಡಿಸಿದ ಡೋನಾಲ್ಡ್ ಟ್ರಂಪ್