ಕ್ರೈಂವೈರಲ್ ನ್ಯೂಸ್

ವಿವಾಹಿತ ಗೋವಿಂದಮ್ಮಳ ಜೊತೆ ಅಬ್ದುಲ ನ ಅಕ್ರಮ ಸಂಬಂಧ..! ಅಡ್ಡಿಯಾಗಿದ್ದ ಮಗುವಿಗೆ ಚಾಕಲೇಟ್ ಕೊಡಿಸಿ ಕೊಲೆ..!

ನ್ಯೂಸ್ ನಾಟೌಟ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪುತ್ರನಿಗೆ ಚಾಕಲೇಟ್ ಕೊಡಿಸಿ ಪ್ರಿಯಕರ ಕೊಲೆ ಮಾಡಿರುವ ಘಟನೆ ಯಾದಗಿರಿಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು 11 ವರ್ಷದ ನರೇಂದ್ರ ಎಂದು ಗುರುತಿಸಲಾಗಿದೆ.

ಹಲವು ವರ್ಷಗಳಿಂದ ನರೇಂದ್ರನ ತಾಯಿ ಗೋವಿಂದಮ್ಮಳ ಜೊತೆ ಅಬ್ದುಲ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಆರೋಪಿ ಅಬ್ದುಲ್ ಗೋವಿಂದಮ್ಮಳನ್ನು ಓಡಿ ಹೋಗಿ ಮದುವೆಯಾಗೋಣ ಎಂದು ಕರೆದಿದ್ದ. ಆದರೆ ಗೋವಿಂದಮ್ಮ ಮಗನಿಗಾಗಿ ಓಡಿ ಹೋಗಿ ಮದುವೆಯಾಗುವುದನ್ನು ನಿರಾಕರಿಸಿದ್ದಳು. ಆಕೆಯ ಮಗನನ್ನು ಕಿರಾಣಿ ಅಂಗಡಿಗೆ ಕರೆದುಕೊಂಡು ಹೋಗಿ ಚಾಕಲೇಟ್ ಕೊಡಿಸಿದ್ದ. ಬಳಿಕ ಅಲ್ಲಿಂದ ಬಾಲಕನನ್ನು ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ ಎನ್ನಲಾಗಿದೆ. ಆಕೆಯನ್ನು ವರಿಸಿಕೊಳ್ಳಲು ಈ ಕೃತ್ಯವನ್ನು ಎಸಗಿದ್ದ ಎನ್ನಲಾಗಿದೆ.

ಸೆ.30ರಂದು ಅಬ್ದುಲ್ ಬಾಲಕನನ್ನು ಕೊಲೆ ಮಾಡಿದ್ದು, ಅನುಮಾನಾಸ್ಪದವಾಗಿ ಕಂಡಿದೆ. ತನಿಖೆ ನಡೆಸಿದಾಗ ಕಿರಾಣಿ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿ ಬಾಲಕನನ್ನು ಕರೆದೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನ ಸಾವು ನಡೆದ 9 ದಿನಗಳ ಬಳಿಕ ಪ್ರಕರಣ ಬೇಧಿಸಿ ಆರೋಪಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

Related posts

ಪ್ರತಿಷ್ಠಿತ ಬ್ಯಾಂಕ್ ನ ಕೆಲಸ ಬಿಟ್ಟು ಈಕೆ ಕಳ್ಳತನಕ್ಕೆ ಇಳಿದದ್ದೇಕೆ..? ಕಿಲಾಡಿ ಕಳ್ಳಿಯ ಖತರ್ನಾಕ್ ಸ್ಟೋರಿ ಇಲ್ಲಿದೆ

ಮತ್ತೆ ಡಿಕೆಶಿಯನ್ನು ಹಾಡಿ ಹೊಗಳಿದ ಮಾಜಿ ಸಿಎಂ..! ಬಿಜೆಪಿ ನಾಯಕರ ಅಸಮಾಧಾನಕ್ಕೆ ಮತ್ತೆ ಗುರಿಯಾದರೆ ಬೊಮ್ಮಾಯಿ? ಅಷ್ಟಕ್ಕೂ ಬೊಮ್ಮಾಯಿ ಹೇಳಿದ್ದೇನು?

ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಗಂಡನ ಮರ್ಮಾಂಗವನ್ನೇ ಕತ್ತರಿಸಿದ ಹೆಂಡತಿ…!