ಕರಾವಳಿರಾಜಕೀಯವೈರಲ್ ನ್ಯೂಸ್

ಮಠಾಧಿಪತಿಗಳ ಕೈಗೆ ಆಯುಧ ಕೊಡಬೇಕು ಎಂದದ್ದೇಕೆ ಸ್ವಾಮೀಜಿ..? ಲಿಂಗಾಯುತ ಸ್ವಾಮೀಜಿ ಎಚ್ಚರಿಕೆ ನೀಡಿದ್ಯಾರಿಗೆ?

ನ್ಯೂಸ್ ನಾಟೌಟ್ : ನಮ್ಮ ಸಮಾಜದ ನಾಯಕರು, ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಹುಬ್ಬಳ್ಳಿಯಲ್ಲಿ ನಡೆದ ಜಗದೀಶ್ ಶೆಟ್ಟರ್ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರಿಗೂ ಆಯುಧ ಕೊಡಬೇಕು.

ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿ ಆಗುತ್ತಿದೆ. ಮಠಾಧಿಪತಿಗಳಿಗೂ ಇದು ಕಾಡುತ್ತಿದೆ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಮಠಗಳನ್ನ ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ.ಯಾರ ಅಧಃಪತನವನ್ನೂ ನಾವು ಸಹಿಸಬಾರದು. ಮಠಾಧೀಪತಿಗಳು, ರಾಜಕೀಯ ನಾಯಕರು ಸಮಾಜಕ್ಕೆ ಆಧಾರಸ್ತಂಭವಿದ್ದಂತೆ. ಲಿಂಗಾಯತ ನಾಯಕರು ಕಂಬ ಗಟ್ಟಿಯಾಗಿರಬೇಕು ಎಲ್ಲರೂ ಎಚ್ಚೆತ್ತುಕೊಳ್ಳುವ ಕಾಲ ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಿಎಂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರನ್ನು ಸ್ಥಾನದಿಂದ ಕೆಳಗಿಳಿಸಿದ ಬಳಿಕ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶಗೊಂಡಿದ್ದರು ಎನ್ನಲಾಗಿದೆ.

Related posts

ಸುಳ್ಯ: ಮತ್ತೊಂದು ಕಳವು ಪ್ರಕರಣ;ಚಾಕಲೇಟ್‌,ಸಿಗರೇಟ್‌ ಸೇರಿದಂತೆ ಕಾಣಿಕೆ ಹುಂಡಿಯಲ್ಲಿದ್ದ ನಗದನ್ನು ಬಿಡದ ಕಳ್ಳರು..!

ಮಂಗಳೂರು ನಗರ ಸೇರಿ ಹಲವೆಡೆ ತಂಪೆರೆದ ಮಳೆ, ಮುಂದಿನ ಎರಡು ದಿನಗಳ‌ ಕಾಲ ಮಳೆ ಸಾಧ್ಯತೆ

ಮಾವಿನಕಟ್ಟೆ: ಅಂಗಡಿಗೆ ನುಗ್ಗಲು ಯತ್ನಿಸಿದ ಕಳ್ಳರು!, ಕಳ್ಳರ ಹಾವಳಿಗೆ ರೋಸಿಹೋದ ಅಂಗಡಿ ಮಾಲೀಕರು