Latestರಾಜ್ಯವೈರಲ್ ನ್ಯೂಸ್

ಕೋಟ್ಯಾಧೀಶ್ವರನ 26 ವರ್ಷದ ಪುತ್ರಿ ಎಲ್ಲವನ್ನೂ ತೊರೆದು ಸನ್ಯಾಸತ್ವ ಸ್ವೀಕಾರ..! ಕೊನೆಯದಾಗಿ ಹೊಸ ಬಟ್ಟೆ, ಚಿನ್ನಾಭರಣ ಧರಿಸಿ ಮೆರವಣಿಗೆ..!

1k

ನ್ಯೂಸ್ ನಾಟೌಟ್: ಯಾದಗಿರಿಯಲ್ಲಿ ಕೋಟ್ಯಾಧೀಶ್ವರನ 26 ವರ್ಷದ ಪುತ್ರಿ ಐಷಾರಾಮಿ ಜೀವನ ತ್ಯಜಿಸಿ ಸನ್ಯಾಸತ್ವ ಸೀಕಾರಕ್ಕೆ ಮುಂದಾಗಿದ್ದಾರೆ.

ಯಾದಗಿರಿ ನಗರದ ಜೈನ್ ಬಡಾವಣೆಯ ನರೇಂದ್ರ ಗಾಂಧಿ ಹಾಗೂ ಸಂಗೀತಾ ಗಾಂಧಿ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪುತ್ರ ಇದ್ದಾನೆ. ಅದರಲ್ಲಿ ಈಗ26 ವರ್ಷದ ಪುತ್ರಿ ನಿಖಿತಾ ಐಷಾರಾಮಿ ಜೀವನ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ.

ನರೇಂದ್ರ ಗಾಂಧಿ ಕೋಟ್ಯಾಧಿಪತಿ. ದೊಡ್ಡ ಶ್ರೀಮಂತ. ಆದರೆ, ಇದೀಗ ಕೋಟ್ಯಾಧೀಶನ ಪುತ್ರಿ ನಿಖಿತಾ ಸಿರಿ ಸಂಪತ್ತು ಯಾವುದು ಬೇಡವೆಂದು ಸನ್ಯಾಸತ್ವಕ್ಕೆ ಕಾಲಿಟ್ಟಿದ್ದಾರೆ. ಕಳೆದ ಏಳು ವರ್ಷದಿಂದ ಸನ್ಯಾಸಿ ಆಗಬೇಕೆಂದು ನಿಖಿತಾ ಬಯಸಿದ್ದಳು ಎನ್ನಲಾಗಿದೆ. ಅದರಂತೆ ಇದೀಗ ನಿಖಿತಾಳ ಆಸೆ ಈಡೇರಿದೆ.

ನಿಖಿತಾ ಸನ್ಯಾಸತ್ವ ಸ್ವೀಕರಿಸಲು ತೀರ್ಮಾನಿಸಿದ್ದರಿಂದ ಕೊನೆಯದಾಗಿ ಸಂಬಂಧಿಕರು ಎಲ್ಲರೂ ಸೇರಿ ಯಾದಗಿರಿಯಲ್ಲಿಂದು ನಿಖಿತಾಳನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಿದ್ದಾರೆ. ನಾನಾ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಗಿದ್ದು, ಇದರಲ್ಲಿ ಇಡೀ ಜೈನ ಸಮುದಾಯವೇ ಪಾಲ್ಗೊಂಡಿದ್ದರು.

ತಾನು ಇನ್ಮುಂದೆ ಯಾವುದೇ ವಸ್ತುಗಳನ್ನ ಬಳಸಲ್ಲ ಎನ್ನುವ ಕಾರಣಕ್ಕೆ ನಿಖಿತಾ ಮೆರವಣಿಗೆ ವೇಳೆ ಹೊಸ ಬಟ್ಟೆ ಸೇರಿದಂತೆ ನಾನಾ ವಸ್ತುಗಳನ್ನ ಜನರಿಗೆ ದಾನ ಮಾಡಿರು. ಹೀಗಾಗಿ ಕೊನೆಯದಾಗಿ ಹೊಸ ಬಟ್ಟೆ, ಚಿನ್ನಾಭರಣ ಧರಿಸಿಕೊಂಡು ಖುಷಿಪಟ್ಟರು.

4ನೇ ಮಹಡಿಯಿಂದ ಹಾರಿದ 17 ವರ್ಷದ ಬಾಲಕ..! ಆತನ ಹೆತ್ತವರು ಹೇಳಿದ್ದೇನು..?

ಸಮುದ್ರದಲ್ಲಿ ಇರಾನಿನ ಮೀನುಗಾರಿಕಾ ಹಡಗಿನಲ್ಲಿದ್ದ ಪಾಕ್‌ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆ ಮಾಡಿ ಕಾಪಾಡಿದ ಭಾರತೀಯ ನೌಕಾಪಡೆ..! ಸತತ 3ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ..!

See also  ಸರ್ಕಾರಿ ಬಸ್‌ ನೊಳಗೆ ಕಂಡಕ್ಟರ್ ಗೆ ಚಾಕು ಇರಿದ ಯುವಕ..! ಭಯಭೀತರಾಗಿ ಬಸ್ಸಿನಿಂದ ಇಳಿದು ಓಡಿದ ಪ್ರಯಾಣಿಕರು..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget