ಕರಾವಳಿ

ಅಕ್ರಮ-ಸಕ್ರಮ ಸಮಿತಿ ಸಭೆ ಹಾಗೂ ಮಂಜೂರಾತಿ ಪತ್ರಗಳ ವಿತರಣೆ

695

ಕಡಬ: ಇಲ್ಲಿನ ತಾಲೂಕಿಗೆ ಸಂಬಂಧಪಟ್ಟ ಹಾಗೆ ಅಕ್ರಮ-ಸಕ್ರಮ ಸಮಿತಿ ಸಭೆಯನ್ನು ಸಚಿವ ಎಸ್ ಅಂಗಾರ ರವರ ಅಧ್ಯಕ್ಷತೆಯಲ್ಲಿ ಬುಧವಾರ ಪೆರಾಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿವಿಧ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಿಸಲಾಯಿತು. ಒಟ್ಟು 37 ಫಲಾನುಭವಿಗಳಿಗೆ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ, ಕಡಬ ತಾಲೂಕಿ 21 ಫಲಾನುಭವಿಗಳಿಗೆ ಈ ಹಿಂದಿನ ಅಕ್ರಮ ಸಕ್ರಮ ಬೈಠಕ್ ನಲ್ಲಿ ಮಂಜೂರಾದ ಸಾಗುವಳಿ ಚೀಟಿಗಳನ್ನು ಸಚಿವರು ವಿತರಣೆ ಮಾಡಿದರು. ಇಂದಿನ ಅಕ್ರಮ ಸಕ್ರಮ ಬೈಠಕ್ ನಲ್ಲಿ ಕಡಬ ತಾಲೂಕಿಗೆ ಸಂಬಂಧಿಸಿದ ವಿವಿಧ ಗ್ರಾಮಗಳ ಒಟ್ಟು 125 ಕಡತಗಳನ್ನು ವಿಲೇವಾರಿ ಮಾಡಲಾಯಿತು.

See also  ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ, ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget