Latestಚಿಕ್ಕಮಗಳೂರು

ಚಿಕ್ಕಮಗಳೂರು: ಬೆಂಗಳೂರಿನಲ್ಲಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ;ಮತ್ತೆ ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾದ ಪಾಪಿಗಳು!ಸಾವನ್ನಪ್ಪಿದ ಹಸು!

394

ನ್ಯೂಸ್ ನಾಟೌಟ್: ಕಳೆದ ನಾಲ್ಕು ತಿಂಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪಾಪಿಯೋರ್ವ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಘಟನೆ ಬಗ್ಗೆ ಚಿಕ್ಕಮಗಳೂರಿನ ಕಡೂರಿನಿಂದ ವರದಿಯಾಗಿದೆ. ಕಡೂರು  ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಶನಿವಾರ(ಮೇ.1೦) ಬೆಳಕಿಗೆ ಬಂದಿದೆ.

ಏನಿದು ಹೃದಯವಿದ್ರಾವಕ ಘಟನೆ?

ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ ದನ ಇದಾಗಿದೆ. ಇವರ ಬಳಿ ಇದ್ದ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿ ಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಈ ಹಸು ಸತ್ತಿದ್ದು ಈ ಕೃತ್ಯವನ್ನು ಗ್ರಾಮಸ್ಥರು ಖಂಡಿಸುವ ಮೂಲಕ ರೈತರು ಯಗಟಿ ಠಾಣೆಗೆ ದೂರು ನೀಡಿದ್ದಾರೆ.ಬಳಿಕ ಬೀರೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್, ಯಗಟಿ ಪಿಎಸ್ ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲ ಸಮಯಗಳಿಂದ ಚೌಳಹಿರಿಯೂರು ಭಾಗದಲ್ಲಿ ದನಗಳ್ಳರ ಹಾವಳಿ ಹೆಚ್ಚಾಗಿದ್ದು, ಕೊಟ್ಟಿಗೆಯೊಳಗೆ ಹಾಗೂ ಮನೆ ಮುಂಭಾಗದಲ್ಲಿ ಕಟ್ಟಿದ ದನಗಳನ್ನು ರಾತ್ರೋ ರಾತ್ರಿ ಅಪಹರಿಸುತ್ತಿರುವ ಪ್ರಕರಣಗಳು ನಡೆದಿವೆ.ಈವರೆಗೆ ಸುಮಾರು 50 ರಿಂದ 60 ರಾಸುಗಳ ಅಪಹರಣ ನಡೆದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಹೀಗಾಗಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡಬೇಕೆಂಬುದು ಇಲ್ಲಿನ ಗ್ರಾಮಸ್ಥರ ಒತ್ತಾಯವಾಗಿದೆ.

See also  ಬಾಲಿವುಡ್ ನಟಿ ಐಶ್ವರ್ಯಾ ರೈ ಐಷಾರಾಮಿ ಕಾರಿಗೆ ಬಸ್ ಡಿಕ್ಕಿ!ಬಸ್ ಚಾಲಕನ ಕಪಾಳಕ್ಕೆ ಬಾರಿಸಿದ ಅಮಿತಾಬ್ ಬಚ್ಚನ್ ನಿವಾಸದ ಬೌನ್ಸರ್!
  Ad Widget   Ad Widget     Ad Widget   Ad Widget   Ad Widget   Ad Widget