ನ್ಯೂಸ್ ನಾಟೌಟ್ : ಕಾರ್ಖಾನೆಯಲ್ಲಿ ಮಾಲೀಕರ ಮೊಬೈಲ್ ಕಳ್ಳತನದ ಶಂಕೆಯ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ, ವಿದ್ಯುತ್ ಶಾಕ್ ನೀಡಿದ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ನಡೆದಿದೆ. ಮೊಬೈಲ್ ಕದ್ದ ಅನುಮಾನದ ಮೇರೆಗೆ ಆತನನ್ನು ಕ್ರೂರವಾಗಿ ತಳಿಸಿದ್ದಲ್ಲದೆ ವಿದ್ಯುತ್ ಶಾಕ್ ನೀಡಿದ್ದಾರೆ.
ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ತ್ವರಿತವಾಗಿ ನಡೆಸಲಾಗುತ್ತಿದ್ದು, ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯ ಕುಟುಂಬದವರು ಕಳ್ಳತನದ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆತ ಯಾವುದೇ ಮೊಬೈಲ್ ಕದ್ದಿಲ್ಲ, ಸುಳ್ಳು ಆರೋಪದಲ್ಲಿ ಸಿಲುಕಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ಕುಟುಂಬದವರು ದೂರು ದಾಖಲಿಸಿದ್ದಾರೆ.
ಜೀನ್ಸ್ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 14 ವರ್ಷದ ಬಾಲಕನನ್ನು ಮೊಬೈಲ್ ಫೋನ್ ಕಳ್ಳತನದ ಶಂಕೆಯಿಂದ ಘಟಕದ ಮಾಲೀಕರು ತಲೆಕೆಳಗಾಗಿ ನೇತುಹಾಕಿ, ಥಳಿಸಿ, ವಿದ್ಯುತ್ ಶಾಕ್ ನೀಡಿದ್ದಾರೆ . ಕಂಖುಲಿ ಪುರ್ಬಪಾರ ಪ್ರದೇಶದಲ್ಲಿರುವ ಕಾರ್ಖಾನೆಯಿಂದ ಬಾಲಕನನ್ನು ರಕ್ಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.