ಕ್ರೈಂರಾಜ್ಯವೈರಲ್ ನ್ಯೂಸ್

ಮೊಬೈಲ್ ಟವರನ್ನೇ ಹೊತ್ತೊಯ್ದ ಕಳ್ಳರು..! ದೂರು ದಾಖಲಿಸಿದ ಕಂಪನಿ..!

ನ್ಯೂಸ್ ನಾಟೌಟ್: ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್ ಟವರ್ ಕಳ್ಳತನವಾಗಿರುವ ವಿಚಿತ್ರ ಘಟನೆ ಶಿವಮೊಗ್ಗದ ಟಿಪ್ಪು ನಗರದಲ್ಲಿ ನಡೆದಿದೆ.

ಶಿವಮೊಗ್ಗ ಟಿಪ್ಪುನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್ ಟವ‌ರ್ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳು ನಾಪತ್ತೆಯಾಗಿರುವುದು ಕಂಡುಬಂದಿದೆ. ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ.

ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟವರ್ ಮತ್ತು ಬಿಡಿ ಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂ. ಎಂದು ಕಂಪನಿ ತಿಳಿಸಿದೆ.

Click

https://newsnotout.com/2024/10/bigboss-kannada-radha-hiregowda-kannada-news-viral-task/
https://newsnotout.com/2024/10/lawyer-jagadeesh-in-another-program-kannada-news-colors/
https://newsnotout.com/2024/10/brain-dead-kannada-news-viral-news-opration-theatre-doctor/
https://newsnotout.com/2024/10/life-hole-kannada-news-kannamangala-milk-dairy-viral-news/

Related posts

ಮಂತ್ರಿ ಮಾಲ್‌ಗೆ ಬೀಗ ಜಡಿದದ್ದೇಕೆ ಅಧಿಕಾರಿಗಳು..? ಬೀಗ ತೆರೆಯದಂತೆ ಮಾರ್ಷಲ್‌ ಗಳ ಭದ್ರತೆ ಒದಗಿಸಿದ್ಯಾರು..? ಇಲ್ಲಿದೆ ಸಂಪೂರ್ಣ ಮಾಹಿತಿ

ಚಿರತೆಯ ಬಾಲ ಹಿಡಿದು ಬಲೆಗೆ ಎಸೆದ ಯುವಕ..! ಯುವಕನ ಧೈರ್ಯ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಶಾಕ್..!

ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಗಂಡನ ಮರ್ಮಾಂಗವನ್ನೇ ಕತ್ತರಿಸಿದ ಹೆಂಡತಿ…!