ಕರಾವಳಿ

ಉಪ್ಪಿನಂಗಡಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ,ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆಹಿಡಿದು ಹಲ್ಲೆಗೆ ಯತ್ನ

ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ ಸದ್ದು ಮಾಡಿದೆ. ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೋಲೀಸ್ ಠಾಣೆಯ ಬಾಜಾರು ಎಂಬಲ್ಲಿ ನಡೆದಿದೆ.

ವಾರದ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಅದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿದ ಗುಂಪೊಂದು ಅವರ ಮೇಲೆ ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಘಟನೆಯ ವಿಡಿಯೋ ಲಭ್ಯವಾಗಿದ್ದು,ಸ್ಥಳದಲ್ಲಿ ಸಂಭಾಷಣೆ ನಡೆಸಿದ್ದು ಕೂಡ ರೆಕಾರ್ಡ್‌ ಆಗಿದೆ.ಘಟನೆಗೆ ಸಂಬಂಧಿಸಿ ವಿಧ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ಉಪ್ಪಿನಂಗಡಿ ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

Related posts

ಹಿಂದೂಗಳಿಗೆ ದೇಗುಲ ನಿರ್ಮಾಣಕ್ಕೆ ಮುಸ್ಲಿಮರಿಂದ ಭೂದಾನ..! ದೇಗುಲದ ಶಂಕು ಸ್ಥಾಪನೆಯ ಅನ್ನ ಪ್ರಸಾದ ಸವಿದ ಮುಸ್ಲಿಮರು

ರೀಲ್ಸ್ ನಿಂದಲೇ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ:554 ಮಿಲಿಯನ್ ವೀವ್ಸ್‌ ಹೊಂದಿರುವ ಆ ವಿಡಿಯೋದಲ್ಲಿ ಅಂಥದ್ದೇನಿದೆ?

ಸುಳ್ಯ:ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ , ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು