ಕ್ರೈಂವೈರಲ್ ನ್ಯೂಸ್

5 ತಿಂಗಳ ಹಸುಗೂಸಿನ ದುರಂತ ಅಂತ್ಯ..! ಕರುಳ ಕುಡಿಗೆ ವಿಷವುಣಿಸಿದಳೇ ತಾಯಿ? ಏನಿದು ಅಮಾನವಿಯ ಘಟನೆ?

202

ನ್ಯೂಸ್ ನಾಟೌಟ್: ‘ಕೆಟ್ಟ ಮಕ್ಕಳಿರಬಹುದು ತಾಯಿ ಇರಲು ಸಾಧ್ಯವಿಲ್ಲ’ ಎಂಬ ಗಾದೆ ಹಲವು ಭಾರಿ ಸುಳ್ಳಾಗಿದೆ. ಇಲ್ಲೊಂದು ಅದಕ್ಕೆ ನಿದರ್ಶನವೆಂಬಂತೆ ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸಿನ ಜೀವ ತೆಗೆದಿದ್ದಾಳೆ.

ಈ ಘಟನೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಕೇಳಿಬಂದಿದೆ. ಈ ಘಟನೆ ಆಗಸ್ಟ್ 30 ರಂದು ಯಾದಗಿರಿಯ ಬಬಲಾದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿಜ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ದೇವಮ್ಮ ಚೆಟ್ಟಿಗೇರಿ ಎಂಬಾಕೆ ಆರೋಪಿಯಾಗಿದ್ದು, ಈಕೆ ಸಂಗೀತಾ ಚೆಟ್ಟಿಗೇರಿ ಎಂಬ ಪುಟ್ಟ ಮಗುವಿಗೆ ಹಾಲಿನಲ್ಲಿ ವಿಷ ಬೆರೆಸಿ ಕೃತ್ಯ ಎಸಗಿದ್ದಾಳೆ.

ಹಸುಗೂಸಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ದೇವಮ್ಮ, ತಾನು ಹಾಲುಣಿಸುತ್ತೇನೆ ಎಂದು ಕರೆದೊಯ್ದಿದ್ದಾಳೆ. ಹೀಗೆ ರೂಮಿಗೆ ಕರೆದೊಯ್ದು ಡೋರ್ ಹಾಕಿ ಹಾಲಿನ ಬಾಟ್ಲಿಯಲ್ಲಿ ವಿಷ ಬೆರೆಸಿ ಕೂಸಿಗೆ ಕೊಟ್ಟಿದ್ದಾಳೆ ಎಂದು ಹೇಳಲಾಗಿದೆ.

ವಿಷಬೆರೆತ ಹಾಲು ಕುಡಿದ ಸಂಗೀತಾ 3 ಗಂಟೆ ನಂತರ ಬಾಯಲ್ಲಿ ನೊರೆ ಬಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ. ಸದ್ಯ ವಡಗೇರಾ ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದ. 11 ವರ್ಷಗಳ ಹಿಂದೆ ಸಿದ್ದಪ್ಪ ಮೊದಲು ಶ್ರೀದೇವಿಯನ್ನ ಮದುವೆಯಾಗಿದ್ದ. ಆದರೆ ಮಕ್ಕಳಾಗದ ಹಿನ್ನೆಲೆ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದ ಎನ್ನಲಾಗಿದೆ. ದೇವಮ್ಮಳನ್ನ ಮದುವೆಯಾದ್ಮೇಲೆ ಮೊದಲ ಪತ್ನಿ ಶ್ರೀದೇವಿ ಗಂಡನ ಮನೆ ಬಿಟ್ಟು ಚಾಮನಳ್ಳಿಯ ತನ್ನ ತವರು ಮನೆಯಲ್ಲಿದ್ದಳು.

ಹಿರಿಯರ ರಾಜಿ ಸಂಧಾನದ ನಂತರ ಮೂರು ವರ್ಷಗಳ ಹಿಂದೆ ಬಬಲಾದ ಗ್ರಾಮದ ಗಂಡನ ಮನೆಗೆ ಶ್ರೀದೇವಿ ಮತ್ತೆ ಬಂದಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿತ್ತು. ಇತ್ತ ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿಯ ಐದು ತಿಂಗಳ ಮಗು ಸಂಗೀತಾಗೆ ಪಾಲು ಹೋಗುಬಾರದು ಎಂದು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

See also  150 ವರ್ಷದ ಹಳೆಯ ನಿಗೂಢ ಕಿ.ಮೀ. ಮೈಲಿಗಲ್ಲಿಗೆ ಇಲ್ಲಿ ವಿಶೇಷ ಪೂಜೆ ನಡೆಸೋದು ಏಕೆ? ಆ ಮೈಲಿಗಲ್ಲಿನ ರಹಸ್ಯವೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget