Latestಕ್ರೈಂದೇಶ-ವಿದೇಶ

ಅನಾರೋಗ್ಯದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಹೆಂಡತಿ ಮಕ್ಕಳ ಸಮೇತ ಕುಂಭ ಮೇಳಕ್ಕೆ ಹೋದ ಮಗ..! 3 ದಿನಗಳಿಂದ ಅನ್ನ, ನೀರು, ಬೆಳಕಿಲ್ಲದೆ ಸಂಕಟ ಪಡುತ್ತಿದ್ದ ವೃದ್ಧೆಯ ಕರುಣಾಜನಕ ಕಥೆ..!

1.7k
localites

ನ್ಯೂಸ್ ನಾಟೌಟ್:ವೃದ್ಧ ತಾಯಿಯನ್ನು ಮನೆಯಲ್ಲಿ ಕೂಡಿ ಹಾಕಿ ಮಗನೊಬ್ಬ ಮಹಾಕುಂಭ ಮೇಳಕ್ಕೆ ಹೋದ ಘಟನೆ ಜಾರ್ಖಂಡ್ ​ನಲ್ಲಿ ನಡೆದಿದೆ. ಜಾರ್ಖಂಡ್ ನ ರಾಮಗಢದ ಮನೆಯೊಂದರಲ್ಲಿ ಬಂಧಿಯಾಗಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮಹಿಳೆಯನ್ನು ಆಕೆಯ ಮಗ ಮನೆಯೊಳಗೆ ಬಂಧಿಯಾಗಿಸಿ, ನಂತರ ಮಹಾ ಕುಂಭ ಮೇಳದಲ್ಲಿ ಭಾಗವಹಿಸಲು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಪ್ರಯಾಗ್​ರಾಜ್​ಗೆ ಹೋಗಿದ್ದ.
ಮೂರು ದಿನಗಳ ಕಾಲ ಆ ವೃದ್ಧೆ ಅನ್ನ, ನೀರಿಲ್ಲದೆ ಸಂಕಟಪಟ್ಟಿದ್ದಾರೆ, ಹಸಿವು ಹಾಗೂ ಸಂಕಟದ ಕೂಗು ಅಕ್ಕಪಕ್ಕದ ಮನೆಯವರಿಗೆ ಕೇಳಿಸಿತ್ತು. ಅವು ಮನೆಯ ಬಾಗಿಲು ಒಡೆದು ಒಳಗೆ ನುಗ್ಗಿದಾಗ ಅಚ್ಚರಿ ಕಾದಿತ್ತು. ಹಸಿವಿನಿಂದ ಕಂಗೆಟ್ಟಿದ್ದ ಮಹಿಳೆ ಪ್ಲಾಸ್ಟಿಕ್ ತಿನ್ನಲು ಪ್ರಯತ್ನಿಸುತ್ತಿದ್ದರು. ಕೂಡಲೇ ಜನರು ಅವರಿಗೆ ಆಹಾರ ತಂದುಕೊಟ್ಟರು.

ಆ ಮಹಿಳೆಯ ಮಗನನ್ನು ಅಖಿಲೇಶ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಸೋಮವಾರ ತನ್ನ ಕುಟುಂಬದವರೊಂದಿಗೆ ಕುಂಭಮೇಳಕ್ಕೆ ಹೊರಟಿದ್ದ ಆತ ತಾಯಿ ಸಂಜು ದೇವಿಯನ್ನು ಮನೆಯೊಳಗೆ ಕೂಡಿ ಹಾಕಿದ್ದ. ಬಳಿಕ ಆಕೆಯ ಮಗಳು ಚಾಂದಿನಿ ದೇವಿಗೆ ಮಾಹಿತಿ ನೀಡಲಾಗಿದೆ. ಚಾಂದನಿ ದೇವಿ, ಅವರ ಚಿಕ್ಕಪ್ಪ ಮಾನಸ ಮಹತೋ ಅವರೊಂದಿಗೆ ಸ್ಥಳಕ್ಕೆ ಧಾವಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಪೊಲೀಸರು ಮಗನನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ಅಖಿಲೇಶ್ ಪ್ರಜಾಪತಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡರು, ಸೋಮವಾರ ಬೆಳಿಗ್ಗೆ 11 ಗಂಟೆಗೆ ನಾನು ಮತ್ತು ನನ್ನ ಕುಟುಂಬವು ನನ್ನ ತಾಯಿಗೆ ಅಕ್ಕಿ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಿದ ನಂತರ ಮನೆಯಿಂದ ಹೊರಟಿದ್ದೆವು ಎಂದು ಹೇಳಿಕೊಂಡಿದ್ದಾರೆ.

ಕುಂಭಮೇಳಕ್ಕೆ ಹೋಗಿ ಬನ್ನಿ ಎಂದು ಅವರೇ ಕಳುಹಿಸಿದ್ದರು. ಅವರು ಅಸ್ವಸ್ಥರಾಗಿದ್ದ ಕಾರಣ ಅಲ್ಲಿಗೆ ಕರೆದುಕೊಂಡು ಹೋಗಿಲ್ಲ ಎಂದು ಹೇಳಿದರು. ಔಪಚಾರಿಕ ದೂರು ದಾಖಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇನ್ಸ್‌ ಪೆಕ್ಟರ್ ಕುಮಾರ್ ತಿಳಿಸಿದ್ದಾರೆ. ಇನ್ನುಮುಂದೆ ತಾಯಿಯ ಜವಾಬ್ದಾರಿಯನ್ನು ತಾನೇ ನೋಡಿಕೊಳ್ಳುವುದಾಗಿ ಮಗಳು ಚಾಂದಿನಿ ಹೇಳಿದ್ದಾಳೆ ಎನ್ನಲಾಗಿದೆ.

 

See also  10 ವರ್ಷದ ವಿಶೇಷ ಚೇತನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಿನ್ಸಿಪಾಲ್..! ಬೆಂಗಳೂರಲ್ಲಿ ನಡೆದ ಅಮಾನವೀಯ ಕೃತ್ಯ ಬಯಲಾದದ್ದೇ ರೋಚಕ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget