Latestರಾಜಕೀಯರಾಜ್ಯ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್..! 11,000 ಪುಟಗಳ ತನಿಖಾ ವರದಿ ಸಲ್ಲಿಕೆ..!

547

ನ್ಯೂಸ್ ನಾಟೌಟ್: ಮುಡಾ ಪ್ರಕರಣದಲ್ಲಿ (MUDA Case) ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್‌ ಚಿಟ್‌ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ತನಿಖಾಧಿಕಾರಿ ಎಸ್‌ಪಿ ಉದೇಶ್ ಇಂದು(ಫೆ.20) ಬೆಳಗ್ಗೆ ಅಂತಿಮ ವರದಿಯ ಜೊತೆ ನ್ಯಾಯಾಲಯಕ್ಕೆ ಆಗಮಿಸಿ ಸಲ್ಲಿಕೆ ಮಾಡಿದ್ದಾರೆ.

50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್‌ ಎಂದೇ ಉಲ್ಲೇಖಿಸಿದ್ದಾರೆ. ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ.
ಪ್ರಕರಣ ಸುಳ್ಳು ಎಂದು ಕಂಡುಬಂದರೆ ಮತ್ತು ಆರೋಪಿಯ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲದೇ ಇದ್ದರೆ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡುವುದು ನಿಯಮ. ಅದರಂತೆ ಈ ಪ್ರಕರಣದಲ್ಲೂ ಸಿದ್ದರಾಮಯ್ಯ ವಿಷಯದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ.

 

See also  ಮಡಿಕೇರಿ: ಕಾಡಾನೆ ಘೀಳಿಗೆ ಹೆದರಿ ವಿದ್ಯುತ್ ಕಂಬಕ್ಕೆ ಗುದ್ದಿ ಕಾಲು ಮುರಿದುಕೊಂಡ ಯುವಕ..! ತುರ್ತಾಗಿ ಸ್ಪಂದಿಸಿದ ಶಾಸಕ ಪೊನ್ನಣ್ಣ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget