ಬೆಂಗಳೂರುರಾಜಕೀಯರಾಜ್ಯವಿಡಿಯೋವೈರಲ್ ನ್ಯೂಸ್

ಶಾಸಕನನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಿದ ಕೋರ್ಟ್..! ತಲೆಮರೆಸಿಕೊಳ್ಳಲು ಆಂಧ್ರಕ್ಕೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಮುನಿರತ್ನ ಅರೆಸ್ಟ್..! ಇಲ್ಲಿದೆ ವೈರಲ್ ಆಡಿಯೋ

ನ್ಯೂಸ್ ನಾಟೌಟ್: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ(ಸೆ.14) ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.

ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

Related posts

ರಿಷಭ್ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಿದ್ದೇಕೆ..? ಏನಿದು ಐಪಿಎಲ್ ನ ನೀತಿ ಸಂಹಿತೆ..?

ಕೈ ಕಾಲು ಕತ್ತರಿಸಿ ಬಿಜೆಪಿ ಕಾರ್ಯಕರ್ತೆಯ ಹತ್ಯೆ..! ಡ್ರಮ್‌ ನೊಳಗಿದ್ದ ಮೃತದೇಹ ಸಿಕ್ಕಿದ್ದೇಗೆ..?

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಪಕ್ಷಕ್ಕೆ ಸೇರಿಸಿಕೊಂಡ ಶಿವಸೇನೆ..? ತೀವ್ರ ವಿರೋಧದ ಬಳಿಕ ನಿರ್ಧಾರ ತಡೆಹಿಡಿದ ಮಹಾರಾಷ್ಟ್ರ ಮುಖ್ಯಮಂತ್ರಿ..!