ಕ್ರೈಂ

ಪೆರ್ಲಂಪಾಡಿ: ತಲವಾರಿನಿಂದ ಕಡಿದು ಭೀಕರ ಕೊಲೆ

483

ನ್ಯೂಸ್ ನಾಟೌಟ್: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ಎಂಬಾತನನ್ನು ಪೆರ್ಲಂಪಾಡಿ ಸಮೀಪ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಚರಣ್ ರಾಜ್ ಮಾಲೀಕತ್ವದ ಮೆಡಿಕಲ್ ಶಾಪ್ ನಾಳೆ ಉದ್ಘಾಟನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಚರಣ್ ರಾಜ್ ನನ್ನು ದ್ವಿಚಕ್ರ ವಾಹನದಲ್ಲಿ ಬಂದ ಹಂತಕರು ತಲವಾರು ಬೀಸಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಬೈಕ್ ನಲ್ಲಿ ಬಂದು ಆರು ಜನರ ತಂಡ ದಾಳಿ ನಡೆಸಿದೆ ಎಂದು ನ್ಯೂಸ್ ನಾಟೌಟ್ ಗೆ ಮಾಹಿತಿ ಲಭಿಸಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರ ಬೀಳಬೇಕಿದೆ. 2019 ಸೆ3 ರಂದು ಸಾರ್ವಜನಿಕ ಗಣೇಶೋತ್ಸವದ ಬಳಿ ಹಿಜಾವೇ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ (27 ) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚರಣ್ ರಾಜ್ ರೈ, ಕಿರಣ್ ರೈ, ಪ್ರೀತೇಶ್ ಶೆಟ್ಟಿ ಈ ಮೂವರನ್ನು ಬಂಧಿಸಲಾಗಿತ್ತು.

See also  ದರ್ಶನ್​ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9ರ ವರೆಗೆ ವಿಸ್ತರಣೆ..! ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್ ಮಾಡದಂತೆ ಆರೋಪಿಗಳಿಂದ ಕೋರ್ಟ್ ಗೆ ಮನವಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget