Latestಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ..! ಜೊತೆಗಿದ್ದವರಿಂದಲೇ ಕೃತ್ಯ..? ಗನ್ ಮ್ಯಾನ್ ಪೊಲೀಸ್ ವಶಕ್ಕೆ..!

2.2k

ನ್ಯೂಸ್‌ ನಾಟೌಟ್‌: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ರಿಕ್ಕಿ ರೈ ಮನೆಯ ಭದ್ರತೆ ನೋಡಿಕೊಳ್ಳುತ್ತಿದ್ದ ವಿಠ್ಠಲ್‌ ನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಏ.18ರ ಮಧ್ಯರಾತ್ರಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇದು ಸುಪಾರಿ ಕಿಲ್ಲರ್‌ ನಿಂದ ನಡೆದ ಅಟ್ಯಾಕಾ ಅಥವಾ ಜೊತೆಯಲ್ಲಿದ್ದವರಿಂದಲೇ ನಡೆದ ಕೊಲೆ ಯತ್ನವಾ ಎಂಬ ಅನುಮಾನದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳು ಮಹತ್ವದ ಸುಳಿವು ನೀಡಿವೆ.

ಮನೆಗೆಲಸದವರು, ಗನ್ ಮ್ಯಾನ್‌ ಗಳು, ಸೆಕ್ಯುರಿಟಿ, ಮ್ಯಾನೇಜರ್ ಹಾಗೂ ಆಡಿಟರ್‌ ಗಳನ್ನ ವಿಚಾರಣೆ ಮಾಡಿದ್ದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ವಿಚಾರಣಾಧೀನರ ಹೇಳಿಕೆಗೂ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳಿಗೂ ತಾಳೆ ಆಗದಿರುವುದು ಕಂಡು ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ ಬಂದಿದೆ.

ಸೋಮವಾರ ಇಡೀ ದಿನ ರಿಕ್ಕಿ ರೈ ಗನ್ ಮ್ಯಾನ್‌ಗಳನ್ನ ವಿಚಾರಣೆ ಮಾಡಿದ್ದ ಪೊಲೀಸರು, ಬಿಡದಿ ಫಾರ್ಮ್ ಹೌಸ್ ನಲ್ಲೂ ಸಂಪೂರ್ಣ ತಲಾಶ್ ಮಾಡಿದ್ದರು. ಪರಿಶೀಲನೆ ವೇಳೆ ಫೈರಿಂಗ್ ಸ್ಥಳದಲ್ಲಿ ಸಿಕ್ಕ ಗುಂಡಿಗೂ ರಿಕ್ಕಿ ರೈ ಮನೆಯ ಭದ್ರತೆ ನೋಡಿಕೊಳ್ಳುತ್ತಿದ್ದ ವಿಠ್ಠಲ್ ಎಂಬಾತನ ಗನ್‌ ಗೂ ಸಾಮ್ಯತೆ ಇದೆ ಎನ್ನುವುದು ತಿಳಿದಿದೆ. ಹಾಗಾಗಿ ಗನ್ ಮ್ಯಾನ್ ವಿಠ್ಠಲ್‌ ನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸಲು ಸಿಮ್ ಇಲ್ಲದ ಮೊಬೈಲ್ ಬಿಸಾಕಿ, ನಾಲ್ವರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುತ್ತಪ್ಪ ರೈ ಗನ್ ಮ್ಯಾನ್ ಆಗಿದ್ದ ಮಡಿಕೇರಿ ಮೂಲದ ವಿಠ್ಠಲ್, ಮುತ್ತಪ್ಪ ರೈ ನಿಧನದ ಬಳಿಕ ಅವರ ಕುಟುಂಬದ ಭದ್ರತೆ ನೋಡಿಕೊಳ್ಳುತ್ತಿದ್ದರು. ಇತ್ತೀಚೆಗೆ ಅನಾರೋಗ್ಯ ಹೆಚ್ಚಾಗಿದ್ದ ಕಾರಣ ಅವರಿಗೆ ಬಿಡದಿ ಮನೆಯ ಭದ್ರತೆ ಜವಾಬ್ದಾರಿ ನೀಡಲಾಗಿತ್ತು. ಘಟನೆ ನಡೆಯುವ ಮುನ್ನ ರಿಕ್ಕಿ ರೈ ಹಾಗೂ ವಿಠ್ಠಲ್ ಪ್ರತ್ಯೇಕ ಮಾತುಕತೆ ನಡೆಸಿದ್ದು, ಮನೆಯಿಂದ ಹೊರ ಹೋಗಿದ್ದರು ಎನ್ನಲಾಗಿದೆ.
ಘಟನೆ ನಡೆದು ರಿಕ್ಕಿ ರೈ ಆಸ್ಪತ್ರೆಗೆ ಸೇರಿದ ಬಳಿಕ ಮತ್ತೆ ವಿಠ್ಠಲ್ ಮನೆಗೆ ವಾಪಸ್ ಬಂದಿದ್ದ ಎಂಬುದು ಮನೆಯ ಸಿಸಿಟಿವಿ ಕ್ಯಾಮರಾದಿಂದ ಪೊಲೀಸರಿಗೆ ತಿಳಿದುಬಂದಿದೆ. ಹಾಗಾಗಿ ವಿಠ್ಠಲ್‌ನನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವಿಠ್ಠಲ್‌ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಮತ್ತಷ್ಟು ವಿಚಾರಣೆ ನಡೆಯಲಿದೆ ಎನ್ನಲಾಗಿದ್ದು, ಈ ದಾಳಿಯ ಬಗ್ಗೆ ಹಲವು ಅನುಮಾನಗಳು ಉಂಟಾಗಿವೆ.

ಏ. 24 ರಂದು ಶೂನ್ಯ ನೆರಳಿನ ದಿನ..! ಈ ವಿದ್ಯಮಾನದ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು..?

See also  ಉಡುಪಿ: ಶಾಲೆ- ಕಾಲೇಜುಗಳ ರಜೆಯ ನಕಲಿ ಸುತ್ತೋಲೆ ವೈರಲ್..! ಇಲ್ಲಿದೆ ಸಂಪೂರ್ಣ ಮಾಹಿತಿ

“ನೀನ್ ಹೊರಗೆ ಸಿಗು ನೋಡ್ಕೊತೀನಿ….”ಎಂದು ಎಲ್ಲರೆದುರು ಕೋರ್ಟ್ ನಲ್ಲಿ ನ್ಯಾಯಾಧೀಶೆಗೆ ಜೀವ ಬೆದರಿಕೆ..! ನಿವೃತ್ತ ಶಿಕ್ಷಕನಿಗೆ 1.10 ವರ್ಷ ಜೈಲು..!

  Ad Widget   Ad Widget   Ad Widget   Ad Widget   Ad Widget   Ad Widget   Ad Widget