ಕರಾವಳಿ

ಪುತ್ತೂರು: ನನ್ನ ಅಜ್ಜ-ಅಜ್ಜಿಗೆ 6 ಕೆ.ಜಿ. ಹಳೆಯ ಚಿನ್ನದ ನಾಣ್ಯ ಸಿಕ್ಕಿದೆ ಎಂದು ಹೇಳಿ ಯಾಮಾರಿಸಲು ಯತ್ನ..! ಕುಂಬ್ರದ ಯುವಕನಿಗೆ ಬಂದ ಅಪರಿಚಿತ ಕರೆಯ ಹಿಂದಿನ ಮಸಲತ್ತೇನು..?

143

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚುತ್ತಿದೆ. ಅಪರಿಚಿತ ವ್ಯಕ್ತಿಗಳು ಹಳೆಯ ಚಿನ್ನಾಭರಣ ಸಿಕ್ಕಿದೆ ಎಂದು ಆಸೆ ತೋರಿಸಿ ಬೆಳ್ತಂಗಡಿಯ ಮೂವರನ್ನು ತುಮಕೂರಿಗೆ ಕರೆಸಿಕೊಂಡು ಕಾರು ಸಮೇತ ಸುಟ್ಟು ಹಾಕಿರುವ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ನಡೆಯುವುದು ಸ್ವಲ್ಪದರಲ್ಲೇ ತಪ್ಪಿರುವ ಬಗ್ಗೆ ವರದಿಯಾಗಿದೆ.

ಅಪರಿಚಿತ ವ್ಯಕ್ತಿಯೋರ್ವ ಪುತ್ತೂರಿನ ವ್ಯಕ್ತಿಯೊಬ್ಬನಿಗೆ ಕರೆ ಮಾಡಿ ಹಳೆಯ ಕಾಲದ ಚಿನ್ನದ ನಾಣ್ಯಗಳು ಸಿಕ್ಕಿದೆ. ಅರ್ಧ ರೇಟಿಗೆ ಮಾರುತ್ತೇವೆ, ಊರಿಗೆ ಬನ್ನಿ ಎಂದು ಹೇಳಿ ಯಾಮಾರಿಸಲು ಯತ್ನಿಸಿದ್ದಾನೆ. ಕುಂಬ್ರದ ಕಾರ್ ಡೀಲರ್ ಸಫುದ್ದೀನ್ ಅನ್ನುವವರು ಈ ಕರೆಯನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.

ಅಪರಿಚಿತ ವ್ಯಕ್ತಿ ನಾನು ನಿಮ್ಮ ಸೆಕೆಂಡ್‌ ಹ್ಯಾಂಡ್ ವೆಹಿಕಲ್ ಶೋರೂಂನಿಂದ ಬೈಕ್ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಮಾತನಾಡಿರುವ ಅಪರಿಚಿತ, “. ಮನೆ ಕಟ್ಟಲು ಪಾಯ ತೆಗೆಯುವ ವೇಳೆ ನನ್ನ ಅಜ್ಜ-ಅಜ್ಜಿಗೆ 6 ಕೆ.ಜಿ. ಹಳೆಯ ಚಿನ್ನದ ನಾಣ್ಯ ಸಿಕ್ಕಿದೆ. ಅದನ್ನು ಅವರು ಮಾರಾಟ ಮಾಡುವಂತೆ ನನ್ನ ಬಳಿ ಹೇಳಿದ್ದಾರೆ. 1 ಕೆ.ಜಿ. ಚಿನ್ನಕ್ಕೆ 30 ಲಕ್ಷ ರೂ. ಇದ್ದು ಅರ್ಧ ಬೆಲೆಗೆ ನಾನು ನಿನಗೆ ತೆಗೆಸಿಕೊಡುತ್ತೇನೆ. ನೀನು ಊರಿಗೆ ತೆರಳಿ ಪರಿಶೀಲಿಸಿದ ಬಳಿಕವೇ ಹಣ ಕೊಟ್ಟರೆ ಸಾಕು ಎಂದೂ ತಿಳಿಸಿದ್ದ.

ಈ ವೇಳೆ ಸಫುìದ್ದೀನ್ ಶೋರೂಂನಿಂದ ಖರೀದಿಸಿದ ಬೈಕ್ ಯಾವುದು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆತ ಸಮರ್ಪಕ ಉತ್ತರ ನೀಡಿಲ್ಲ ಇದರಿಂದ ಅಪರಿಚಿತನ ಮೋಸದ ವ್ಯವಹಾರ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಕೆಲವು ತಿಂಗಳ ಹಿಂದೆ ಚಿನ್ನಾಭರಣ ಗಳು ಸಿಕ್ಕಿವೆ ಅದನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತೇವೆ ಎಂಬ ಆಸೆ ತೋರಿಸಿ ಬೆಳ್ತಂಗಡಿಯ ಮೂವರನ್ನು ತುಮಕೂರಿಗೆ ಕರೆಸಿಕೊಂಡ ವಂಚಕರು ಅವರನ್ನು ಕೊಲೆ ಮಾಡಿ ಕಾರು ಸಮೇತ ಸುಟ್ಟು ಹಾಕಿದ್ದರು.

See also  ಮಂಗಳೂರಿನಲ್ಲಿ ಬಗೆದಷ್ಟು ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರ:ಮತ್ತೆ ನಾಲ್ವರು ಅರೆಸ್ಟ್, ಕಾರ್-ಮೊಬೈಲ್ ವಶ
  Ad Widget   Ad Widget   Ad Widget   Ad Widget   Ad Widget   Ad Widget   Ad Widget