ಕ್ರೈಂರಾಜ್ಯವೈರಲ್ ನ್ಯೂಸ್

ಕೆರೆಯಂಚಿಗೆ ಅಳವಡಿಸಿದ್ದ ತಡೆಗೋಡೆ ಕಂಬದ ನಡುವೆ ಸಿಲುಕಿದ್ದ ಕಾಡಾನೆ..! ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ

173

ನ್ಯೂಸ್ ನಾಟೌಟ್ : ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ(ಜ.5) ಮುಂಜಾನೆ ರಕ್ಷಣೆ ಮಾಡಿದ್ದಾರೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿ ವಲಯದ ಮುದಗನೂರು ಕೆರೆಯಂಚಿನಲ್ಲಿ ಅಳವಡಿಸಿದ್ದ ತಡೆಗೋಡೆ ಕಂಬಗಳಲ್ಲಿ ಸುಮಾರು 30 ವರ್ಷದ ಕಾಡಾನೆ ಸಿಲುಕಿತ್ತು.

ಸ್ಥಳಕ್ಕೆ ಆಗಮಿಸಿದ್ದ ಡಿಸಿಎಫ್ ಸೀಮಾ, ಎಸಿಎಫ್ ಲಕ್ಷ್ಮಿಕಾಂತ್ ಪರಿಶೀಲನೆ ನಡೆಸಿದ್ದಾರೆ.‌ ಜೆಸಿಬಿ ಮೂಲಕ ತಡೆಗೋಡೆಯನ್ನು ತೆರವುಗೊಳಿಸಿದ ಇಲಾಖೆಯ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಆನೆಯನ್ನು ಬಿಡುಗಡೆಗೊಳಿಸಿದ್ದಾರೆ.

‘ಕಂಬಿಗಳಲ್ಲಿ ಸಿಲುಕಿದ್ದ ಆನೆಗೆ 2021ರಲ್ಲಿ ನಾಗರಹೊಳೆ ಎಲಿಫೆಂಟ್ 1 ಎಂಬ ಹೆಸರಿನಲ್ಲಿ ಗುರುತಿಸಿ ರೇಡಿಯೊ ಕಾಲರ್ ಅಳವಡಿಸಲಾಗಿತ್ತು. ಅದರಿಂದ ಆನೆ ಯಾವ ಸ್ಥಳದಲ್ಲಿ ಸಿಲುಕಿದೆಯೆಂದು ತಿಳಿಯಲು ಸಹಕಾರವಾಯಿತು. ಕಾಲರ್ ನ ಸಿಗ್ನಲ್ ಆಧರಿಸಿ ಸ್ಥಳಕ್ಕೆ ಇಲಾಖೆ ಸಿಬ್ಬಂದಿ ಧಾವಿಸಿದ್ದಾರೆ’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕಿ ಸೀಮಾ ತಿಳಿಸಿದರು.

Click

https://newsnotout.com/2025/01/mobile-charging-kannada-news-mother-and-son-kannada-news-d/
https://newsnotout.com/2025/01/15-year-old-girl-nomore-by-cenring-wood-issue-bengaluru/
https://newsnotout.com/2025/01/kannada-news-video-and-issue-husband-and-wife-kannada-news-s/
https://newsnotout.com/2025/01/40-lakh-rupees-goss-profit-for-pani-puri-man-k/
https://newsnotout.com/2025/01/lion-bone-kannada-news-lover-boy-misbehgaviour-s/
https://newsnotout.com/2025/01/marriage-and-love-conflict-with-family-kannada-news-d/
https://newsnotout.com/2025/01/naxal-kannada-news-encounter-kannada-news-police-constable/
See also  ಮಡೆನೂರು ಮನುಗೆ ಎಚ್ಚರಿಕೆ ನೀಡಿದ ನಟ ಜಗ್ಗೇಶ್..! ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ ಎಂದ ನವರಸ ನಾಯಕ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget