ನ್ಯೂಸ್ ನಾಟೌಟ್: ಫೇಸ್ಬುಕ್ನಲ್ಲಿ ಸಂಸದ ಪ್ರತಾಪ್ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಟೆಬಲ್ ಅವರನ್ನು ಅಮಾನತು ಮಾಡಲಾಗಿದೆ.
ಟ್ರಾಫಿಕ್ ಹೆಡ್ ಕಾನ್ಸ್ಟೆಬಲ್ ಬಿ.ಪ್ರದೀಪ್ ಫೇಸ್ಬುಕ್ನಲ್ಲಿ ಬಿಜೆಪಿ ಸಂಸದ ಪ್ರತಾಪ್ಸಿಂಹ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ್ಸಿಂಹ, ಕಮೆಂಟ್ ಸ್ಕ್ರೀನ್ಶಾಟ್ ಜತೆ ಪೊಲೀಸ್ ಕಮಿಷನರ್ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸಂಸದರ ದೂರಿನ ಮೇರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ಟೆಬಲ್ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.