Latestದೇಶ-ವಿದೇಶರಾಜಕೀಯವೈರಲ್ ನ್ಯೂಸ್

ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದ ಮೋದಿ..! ಚಿಕಿತ್ಸೆ ಪಡೆಯುತ್ತಿರುವವರು ಶ್ರೀಘ್ರ ಗುಣಮುಖರಾಗುವಂತೆ ಸರ್ಕಾರ ನೋಡಿಕೊಳ್ಳುತ್ತಿದೆ ಎಂದ ಪ್ರಧಾನಿ

981

ನ್ಯೂಸ್ ನಾಟೌಟ್:ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ​ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಅದಲ್ಲ ಆ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜತೆಗಿದ್ದರೆ ಸಾಕು ಎಂದಿದ್ದಾರೆ.

ಪಹಲ್​ಗಾಮ್ ​ನಲ್ಲಿ ಮೃತಪಟ್ಟವರಲ್ಲಿ ಕೆಲವರು ಕನ್ನಡ ಮಾತನಾಡುವವರಿದ್ದರೆ, ಇನ್ನೂ ಕೆಲವರು ಹಿಂದಿ, ಮರಾಠಿ, ಗುಜರಾತಿ, ಒಡಿಯಾಮ, ಬಾಂಗ್ಲಾ ಹೀಗೆ ಒಬ್ಬೊಬ್ಬರು ಒಂದು ಭಾಷೆಯನ್ನು ಮಾತನಾಡುವವರಾಗಿದ್ದಾರೆ. ಆದರೆ ಅವರ ಸಾವಿಗೆ ಆಕ್ರೋಶ ಮಾತ್ರ ಕಾರ್ಗಿಲ್ ​ನಿಂದ ಕನ್ಯಾಕುಮಾರಿವರೆಗೂ ಒಂದೇ ರೀತಿ ಆಗಿದೆ ಎಂದರು.

ಭಯೋತ್ಪಾದನೆ ಎದುರು ಭಾರತ ಎಂದೂ ತಲೆ ಬಾಗುವುದಿಲ್ಲ, ಭಾರತದಿಂದ ಭಯೋತ್ಪಾದನೆ ತೊಲಗಿಸುವವರೆಗೂ ಬಿಡುವುದಿಲ್ಲ. ಈ ದಾಳಿ ಕೇವಲ ನಿರಾಯುಧ ಪ್ರವಾಸಿಗರ ಮೇಲೆ ನಡೆದಿಲ್ಲ, ದೇಶದ ಶತ್ರುಗಳು ಭಾರತದ ಆತ್ಮದ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ. ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲಾಗದಷ್ಟು ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದಕರ ಬೆನ್ನು ಮುರಿಯಲಿದೆ ಎಂದಿದ್ದಾರೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೌರ್ಯದಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ. ಇಡೀ ರಾಷ್ಟ್ರವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. ಈ ಕುಟುಂಬ ಸದಸ್ಯರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗುವಂತೆ ನೋಡಿಕೊಳ್ಳಲು ಸರ್ಕಾರವೂ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದಿದ್ದಾರೆ.

ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ ಎಂದ ಸಿಎಂ, ಉಗ್ರ ದಾಳಿಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರದ​ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

See also  ಬಿಜೆಪಿ ಸೇರಿದ ಕ್ರಿಶ್ಚಿಯನ್ನರ ಮೇಲೆ ದಾಳಿ..! ಬಿಜೆಪಿ ಸೇರ್ಪಡೆಗೊಂಡ ಅರ್ಚಕರಿಗೂ ಬೆದರಿಕೆ!?
  Ad Widget   Ad Widget   Ad Widget   Ad Widget   Ad Widget   Ad Widget   Ad Widget