ನ್ಯೂಸ್ ನಾಟೌಟ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. 48 ಸ್ಥಾನ ಗೆದ್ದುಕೊಂಡು ಅಧಿಕಾರಕ್ಕೇರಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕಾರ್ಯಕರ್ತನ್ನುದ್ದೇಶಿ ಪ್ರಧಾನಿ ಮೋದಿ ಮಾತನಾಡುತ್ತಿದ್ದ ವೇಳೆ ಕಾರ್ಯಕರ್ತನೊಬ್ಬ ಅಸ್ವಸ್ಥಗೊಂಡಿದ್ದ. ತಕ್ಷಣವೇ ಮೋದಿ ಭಾಷಣ ನಿಲ್ಲಿಸಿದ್ದಾರೆ. ಬಳಿಕ ಕಾರ್ಯಕರ್ತನಿಗೆ ವೈದ್ಯಕೀಯ ನೆರವು ಸೂಚಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಕಿಕ್ಕಿರಿದು ಕಾರ್ಯಕರ್ತರು, ಜಯಘೋಷಗಳಿಂದ ಕಾರ್ಯಕರ್ತನಿಗೆ ಅಸ್ವಸ್ಥೆತೆ ಉಂಟಾಗಿದೆ. ವಿಶ್ರಾಂತಿಗೆ ಅನುವು ಮಾಡಿಕೊಡಿ ಎಂದು ಮೋದಿ ಸೂಚಿಸಿದ್ದಾರೆ. ಕಾರ್ಯಕರ್ತನಿಗೆ ನೀರು ಕೊಡಿ ಎಂದು ಮೋದಿ ಹೇಳಿದ್ದಾರೆ.
ನೀರು ಕುಡಿಯುತ್ತಿದ್ದಂತೆ ಕಾರ್ಯಕರ್ತ ಸ್ವಲ್ಪ ಚೇತರಿಸಿಕೊಂಡಿದ್ದಾರೆ. ಬಳಿಕ ಮೋದಿ ಭಾಷಣ ಮುಂದವರಿಸಿದ್ದಾರೆ. ಮೋದಿಯ ಈ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
Click
ಕುಟುಂಬ ಸಮೇತರಾಗಿ ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ, ಮುಂಜಾನೆ ಪ್ರಯಾಗ್ ರಾಜ್ ಕಡೆ ಪ್ರಯಾಣ
ಪುತ್ತೂರಿನ ಯುವಕ ಆವಿಷ್ಕರಿಸಿದ ಡ್ರೋನ್ ಸೇನೆ ಆಯ್ಕೆ..! ಮೆಷಿನ್ ಗನ್ ಸಹಿತ ಆಗಸದಲ್ಲಿ ಹಾರಾಟ ಮಾಡುವ ಸಾಮರ್ಥ್ಯ..!