ಶಿಕ್ಷಣಸುಳ್ಯ

ಸುಳ್ಯ: ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರಕ್ಕೆ ಚಾಲನೆ

143

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಶನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಜೂ. 10ರಿಂದ 12ರತನಕ ಆಯೋಜಿಸಿದ ರಾ‍ಷ್ಟ್ರೀಯ ಮಟ್ಟದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ವಿಶೇಷ ಕಾರ್ಯಾಗಾರಕ್ಕೆ ಸೋಮವಾರ (ಜೂ.10) ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಶ್ರೀಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಇದರ ಪಂಚಕರ್ಮ ವಿಭಾಗದ ಮುಖ್ಯಸ್ಥರು ಹಾಗೂ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಬೆಂಗಳೂರು ಇದರ ಬೋರ್ಡ್ ಆಫ್ ಸ್ಟಡೀಸ್ ಆಯುರ್ವೇದ ವಿಭಾಗದ ಅಧ್ಯಕ್ಷ ಡಾ. ಗಣೇಶ್ ಪುತ್ತೂರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಿಸರ್ಚ್ ಪೇಪರ್‌ಗಳ ಪ್ರಾಮುಖ್ಯತೆ, ಅಂತಾರಾಷ್ಟ್ರೀಯ ಮಟ್ಟದ ಲೇಖನ ಬರೆಯಲು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲು ಇಂತಹ ಕಾರ್ಯಾಗಾರ ತುಂಬಾ ಪ್ರಯೋಜನಕಾರಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ ನೀಡುವಲ್ಲಿ ಆಯುರ್ವೇದ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಂಸ್ಥೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಾಗಾರಗಳ ಮೂಲಕ ವಿಪುಲ ಅವಕಾಶ ನೀಡುವಲ್ಲಿ ಸದಾ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಅಲೋಪತಿ ವೈದ್ಯ ಪದ್ಧತಿಯವರಿಗೆ ಆಯುರ್ವೇದ ವೈದ್ಯ ಪದ್ಧತಿಯ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)ನ ಕಾರ್ಯದರ್ಶಿ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಇದರ ಸೆನೆಟ್ ಮೆಂಬರ್ ಡಾ. ಐಶ್ವರ್ಯ ಕೆ.ಸಿ. ಮಾತನಾಡಿ, ಇಂತಹ ಕಾರ್ಯಾಗಾರಗಳು ಹೆಚ್ಚು ಹೆಚ್ಚು ವಿಚಾರಗಳನ್ನು ತಿಳಿಯಲು ಅನುಕೂಲ ಮಾಡಿಕೊಡುತ್ತದೆ. ಬೇರೆ ಬೇರೆ ಸ್ಥಳಗಳಿಂದ ಬಂದಂತಹ ನಾವು ನಮ್ಮೊಳಗೆ ವಿಚಾರಗಳನ್ನು ವಿನಿಮಯಮಾಡಿಕೊಂಡಾಗ ನಮ್ಮ ವಿಷಯಜ್ಞಾನ ವೃದ್ಧಿಸುತ್ತದೆ ಎಂದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ, ಕಾರ್ಯಾಗಾರದ ಆಯೋಜಕರು ಹಾಗೂ ದ್ರವ್ಯಗುಣ ವಿಭಾಗದ ಪ್ರೊಫೆಸರ್ ಡಾ. ಕವಿತಾ ಬಿ. ಎಂ. ಉಪಸ್ಥಿತರಿದ್ದರು.

ಕಾರ್ಯಾಗಾರದ ತರಬೇತುದಾರರಾದ ಡಾ. ಪ್ರತಿಭಾ ಸಿ.ಕೆ., ಡಾ.ಆಶಾ ಎಸ್.ಎ., ಡಾ. ನಳಿನಾ ಸರಸ್ವತಿ, ದೇಶದ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರು, ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಡಾ. ಲೀಲಾಧರ್ ಡಿ.ವಿ. ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಡಾ. ಕವಿತಾ ಬಿ. ಯಂ. ವಂದಿಸಿದರು. ಡಾ. ಗೌರಿ ಪಾರ್ವತಿ ಮತ್ತು ಡಾ. ಸೂರ್ಯಪ್ರಿಯ ಪ್ರಾರ್ಥಿಸಿದರು. ಡಾ. ಹರ್ಷಿತಾ ಎಂ. ಮತ್ತು ಡಾ. ನಿಲೋಫರ್ ತಹನಿ ಆರ್. ಎ., ಕಾರ್ಯಕ್ರಮ ನಿರೂಪಿಸಿದರು.

  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget