ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ನವಮಿ ಸ್ಟೋರ್ ಮಾಲೀಕ ಯು ಬಿ ಚಕ್ರಪಾಣಿ ಅವರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇವರು ನೀಡುವ ತಾಲೂಕು ಮಟ್ಟದ ಅತ್ಯುತ್ತಮ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟಗಾರ ಎನ್ನುವ ಸಾಧನೆಗೆ ಪಾತ್ರರಾಗಿದ್ದಾರೆ. ಸುಳ್ಯ ತಾಲೂಕಿನಲ್ಲಿಯೇ ಇವರು ಪ್ರಥಮ ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.
ಕಳೆದ ಸಲವೂ ಇವರಿಂದ ಇಂತಹದ್ದೇ ಒಂದು ಸಾಧನೆ ಹೊಮ್ಮಿದ್ದನ್ನು ಇಲ್ಲಿ ಸ್ಮರಿಸಬಹುದು. ಯುಬಿ ಚಕ್ರಪಾಣಿ ಕಳೆದ ಹಲವು ವರ್ಷಗಳ ಹಿಂದೆ ಕಲ್ಲುಗುಂಡಿಯಲ್ಲಿ ನವಮಿ ಸ್ಟೋರ್ ಸ್ಥಾಪಿಸಿ ಊರಿನ ಹಾಗೂ ಪರವೂರಿನ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಯುಬಿ ಚಕ್ರಪಾಣಿಯವರು ಹಲವಾರು ವಿದ್ಯಾರ್ಥಿಗಳಿಗೆ ತಮ್ಮ ಕೈಯಿಂದ ಆದ ಸಹಾಯವನ್ನು ಮಾಡಿದ್ದಾರೆ.