Latestಕ್ರೈಂರಾಜ್ಯವೈರಲ್ ನ್ಯೂಸ್

ಪಕ್ಕದ ಮನೆಯಾತನಿಂದ ಕಿರುಕುಳ..! ಡೆತ್ ನೋಟ್ ಬರೆದಿಟ್ಟು ಅಪ್ರಾಪ್ತ ಬಾಲಕಿ ನೇಣಿಗೆ ಶರಣು..!

545

ನ್ಯೂಸ್ ನಾಟೌಟ್: ಪಕ್ಕದ ಮನೆಯಾತನ ಮಾನಸಿಕ, ದೈಹಿಕ ಕಿರುಕುಳಕ್ಕೆ ನೊಂದು ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ಎ.30ರ ಬುಧವಾರ ನಡೆದಿದೆ.

ತನ್ನ ಪಕ್ಕದ ಮನೆಯ ವ್ಯಕ್ತಿ ಸುರೇಶ ಎಂಬವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಭಂಗ ಮಾಡಿ, ಕಿರುಕುಳ ನೀಡಿದ್ದಾನೆ, ಅವನನ್ನು ಬಿಡಬೇಡಿ ಎಂದು ಅಪ್ರಾಪ್ತೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ನಿನ್ನೆ (ಎ.30ರ ಬುಧವಾರ) ಬಾಲಕಿಯ ಪೋಷಕರು ಸಂಬಂಧಿಕರ ಮದುವೆಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವ್ಯಕ್ತಿ ಬಾಲಕಿಯ ಮೇಲೆ ಎರಗಿದ್ದ ಎಂಬ ಆರೋಪ ಕೇಳಿ ಬಂದಿದೆ.

ಸದ್ಯ ಆರೋಪಿ ಸುರೇಶನನ್ನು ತೋರಣಗಲ್ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಯುತ್ತಿದೆ.

ಅಫ್ಘಾನಿಸ್ತಾನದಿಂದ ಭಾರತಕ್ಕೆ ಸರಕು ಸಾಗಾಟ ಮಾಡಲು ಅನುಮತಿ ಕೊಟ್ಟ ಪಾಕ್..! ಪಾಕ್‍ ವಿದೇಶಾಂಗ ಸಚಿವಾಲಯದಿಂದ ಪತ್ರ..!

ಪಾಕಿಸ್ತಾನದಲ್ಲಿ ಭೂಕಂಪ..! ಎರಡು ದಿನಗಳ ಅಂತರದಲ್ಲಿ 2 ಬಾರಿ ಭೂಕಂಪನ..!

See also  ಅಡ್ಕಾರಿನಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ, ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ
  Ad Widget   Ad Widget   Ad Widget   Ad Widget