ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ನೆಲ್ಲೂರು- ಕೆಮ್ರಾಜೆಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಭೀಕರ ಹತ್ಯೆಯೊಂದು ನಡೆದಿದೆ. ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ರಾಮಚಂದ್ರ (52 ವರ್ಷ) ಹಾಗೂ ಕೊಲೆಗೀಡಾದ ಪತ್ನಿಯನ್ನು ವಿನೋದ (42 ವರ್ಷ) ಎಂದು ಗುರುತಿಸಲಾಗಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಇನ್ನಷ್ಟೇ ಆಸ್ಪತ್ರೆಗೆ ಸಾಗಿಸಬೇಕಿದೆ ಎಂದು ತಿಳಿದು ಬಂದಿದೆ.