ನೆಲ್ಯಾಡಿ: ಇಲ್ಲಿನ ಹೈಸ್ಕೂಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ. ಸದ್ಯ ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.