ಕರಾವಳಿಸುಳ್ಯ

ಸುಬ್ರಹ್ಮಣ್ಯ:ಈ ವರ್ಷದಿಂದಲೇ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆರಂಭ, ಕೇಂದ್ರದಿಂದ ನೀಲನಕಾಶೆ ಬಂದಿದೆ:ಸಚಿವ ಬಿ.ಸಿ ನಾಗೇಶ್

464

ನ್ಯೂಸ್ ನಾಟೌಟ್ :ರಾಜ್ಯದಲ್ಲಿ ಈ ವರ್ಷ 400-500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನೂತನ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಆಯ್ದ ಶಾಲೆಗಳಲ್ಲಿ ಅನುಷ್ಠಾನಗೊಳಿಸುತ್ತೇವೆ. ಮುಂದಿನ ವರ್ಷದಿಂದ ಪೂರ್ಣವಾಗಿ ಆರಂಭಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ ಎಂದು ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ಣವಾಗಿ ರಾಜ್ಯಾದ್ಯಂತ ಆರಂಭಿಸುತ್ತೇವೆ.ಆರನೇ  ತರಗತಿಯಿಂದ ವರ್ಷದಿಂದ ೮ನೇ ತರಗತಿ ತನಕದವರಿಗೆ ನೂತನ ಶಿಕ್ಷಣ ನೀತಿ ಪ್ರಕಾರ ಶಿಕ್ಷಣ ನೀಡುವ ವ್ಯವಸ್ಥೆ ಜಾರಿಯಾಗಲಿದೆ.ಈಗಾಗಲೇ ಈ ಬಗ್ಗೆ ಕೇಂದ್ರದಿಂದ ನೀಲನಕಾಶೆ ಬಂದಿದೆ.ಇದರ ನಿಯಮಗಳಿಗೆ ಅನುಸಾರವಾಗಿ ರಾಜ್ಯದಲ್ಲಿ ತನ್ನದೇ ಆದ ನೀಲ ನಕಾಶೆ ಸಿದ್ದಪಡಿಸಿ ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ. ವಾರ್ಷಿಕ ಪರೀಕ್ಷೆಗಳು ಈ ಹಿಂದಿನಂತೆಯೇ ನಡೆಯಲಿದೆ. ಈಗಾಗಲೇ ದಿನಾಂಕ ಘೋಷಿಸಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.

ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ೧೪ರ ಬದಲು ೧೫ಕ್ಕೆ ರಜೆ ನೀಡಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು,ವರ್ಷದಲ್ಲಿ ಐದು ರಜೆಗಳನ್ನು ನೀಡುವ ಅವಕಾಶ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅದರಂತೆ ಅವರು ರಜೆ ನೀಡುತ್ತಾರೆ. ರಜೆ ನೀಡುವಲ್ಲಿಯೂ ಕೆಲವೊಂದು ಬದಲಾವಣೆ ಮಾಡಲಾಗಿದೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಆಗದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಎಂದರು.ಈ ವೇಳೆ ಸಚಿವ ಎಸ್.ಅಂಗಾರ ಜತೆಗಿದ್ದರು.

See also  ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆಯ ಶಾಕ್..! ಪ್ರತಿ ಲೀಟರ್ ಹಾಲಿಗೆ 4 ರೂ. ಹೆಚ್ಚಳ ಮಾಡಲು ಸರ್ಕಾರದ ಒಪ್ಪಿಗೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget